Friday, October 12, 2012

ನಾಕು ತಂತಿ

Haadu - Naaku Tanti
Rachane - Da Ra Bendre
Raaga Samyojane - Mysore Ananthaswamy
Haadiruvavaru - Mysore Ananthaswamy

 http://www.kannadaaudio.com/Songs/Bhaavageethe/Naakutanti-DaRa-Bendre/Naaku.ram

ಒಂದು

ಆವು ಈವಿನ ನಾವು ನೀವಿಗೆ
ಆನು ತಾನದ ತನನನಾS
ನಾನು ನೀನಿನ ಈ ನಿನಾನಿಗೆ
ಬೇನೆ ಏನೋ? ಜಾಣಿ ನಾS
ಚಾರು ತಂತ್ರಿಯ ಚರಣ ಚರಣದ
ಘನಘನಿತ ಚತು- -ರಸ್ವನಾ
ಹತವೊ ಹಿತವೋ ಆ ಅನಾಹತಾ
ಮಿತಿಮಿತಿಗೆ ಇತಿ ನನನನಾ
ಬೆನ್ನಿನಾನಿಕೆ ಜನನ ಜಾನಿಕೆ
ಮನನವೇ ಸಹಿ-ತಸ್ತನಾ.

ಎರಡು*

ಗೋವಿನ ಕೊಡುಗೆಯ ಹಡಗದ ಹುಡುಗಿ ಬೆಡಗಿಲೆ ಬಂದಳು ನಡುನಡುಗಿ;
ಸಲಿಗೆಯ ಸುಲಿಗೆಯ ಬಯಕೆಯ ಒಲುಮೆ ಬಯಲಿನ ನೆಯ್ಗೆಯ ಸಿರಿಯುಡುಗಿ;
ನಾಡಿಯ ನಡಿಗೆಯ ನಲುವಿನ ನಾಲಿಗೆ ನೆನೆದಿರೆ ಸೋಲುವ ಸೊಲ್ಲಿನಲಿ;
ಮುಟ್ಟದ ಮಾಟದ ಹುಟ್ಟದ ಹುಟ್ಟಿಗೆ ಜೇನಿನ ಥಳಿಮಳಿ ಸನಿಹ ಹನಿ;
ಬೆಚ್ಚಿದ ವೆಚ್ಚವು ಬಸರಿನ ಮೊಳಕೆ ಬಚ್ಚಿದ್ದಾವುದೋ ನಾ ತಿಳಿಯೆ.
ಭೂತದ ಭಾವ ಉದ್ಭವ ಜಾವ ಮೊಲೆ ಊಡಿಸುವಳು ಪ್ರತಿಭೆ ನವ.

ಮೂರು

'ಚಿತ್ತೀಮಳಿ, ತತ್ತೀ ಹಾಕತಿತ್ತು ಸ್ವಾತಿ ಮುತ್ತಿನೊಳಗ
ಸತ್ತಿSಯೊ ಮಗನS ಅಂತ ಕೂಗಿದರು
ಸಾವೀ ಮಗಳು, ಭಾವೀ ಮಗಳು ಕೂಡಿ'
'ಈ ಜಗ, ಅಪ್ಪಾ, ಅಮ್ಮನ ಮಗ ಅಮ್ಮನೊಳಗ ಅಪ್ಪನ ಮೊಗ
ಅಪ್ಪನ ಕತ್ತಿಗೆ ಅಮ್ಮನ ನೊಗ ನಾ ಅವರ ಕಂದ
ಶ್ರೀ ಗುರುದತ್ತ ಅಂದ.'
ನಾಕು

 
'ನಾನು' 'ನೀನು' 'ಆನು' 'ತಾನು' ನಾಕೆ ನಾಕು ತಂತಿ,
ಸೊಲ್ಲಿಸಿದರು ನಿಲ್ಲಿಸಿದರು ಓಂ ಓಂ ದಂತಿ!
ಗಣನಾಯಕ ಮೈ ಮಾಯಕ ಸೈ ಸಾಯಕ ಮಾಡಿ
ಗುರಿಯ ತುಂಬಿ ಕುರಿಯ ಕಣ್ಣು ಧಾತು ಮಾತು ಕೂಡಿ

ಮುಚ್ಚುಮರೆಯಿಲ್ಲದೆಯೆ

Raju Ananthaswamy avaru haadiruva, Kuvempu rachita, nanna nechchina geethe - MuchchuMare illadeye.

http://www.youtube.com/watch?v=RWi2ZcbCRxU
 
 
ಮುಚ್ಚುಮರೆಯಿಲ್ಲದೆಯೆ ನಿನ್ನ ಮುಂದೆಲ್ಲವನು
ಬಿಚ್ಚಿಡುವೆ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ ನರಕವಿದೆ ನಾಕವಿದೆ
ಸ್ವೀಕರಿಸು ಓ ಗುರುವೇ ಅಂತರಾತ್ಮ ||

...
ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು
ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಗೆ
ನರಕ ತಾನುಳಿಯುವುದೇ ನರಕವಾಗಿ ||

ಶಾಂತ ರೀತಿಯಳಿಮ್ಮಿ ಕದಡಿರುವುದೆನ್ನಾತ್ಮ
ನಾಂತ ರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನೆಂದೆನ್ನ ರಕ್ಷಿಸೈ
ನಿನ್ನ ನೀತಿಯ ಬೆಳಕಿನ ಆನಂದಕೈ ||

ಬನ್ನಿ ಹರಸಿರಿ ತಂದೆಯೆ

In the honor of Sri Mysore Ananthaswamy & Sri Raju Ananthaswamy, lets hear 'Banni Harasiri Tandeye' in the voice of Raju Ananthaswamy .

http://www.youtube.com/watch?v=Yttf6AUctVw
 
 
ಬನ್ನಿ ಹರಸಿರಿ ತಂದೆಯೆ ಆಸೀನರಾಗಿರಿ ಮುಂದೆಯೆ
ನಿಮ್ಮ ಪ್ರೀತಿಗೆ ಹಾಡುವೆ ನಿಮ್ಮಾಶೀರ್ವಾದವ ಬೇಡುವೆ

ಮೈಯ್ಯ ಕೊಟ್ಟಿರಿ ಮಾಟ ಕೊಟ್ಟಿರಿ ತಿದ್ದಿದಿರಿ ಕಗ್ಗಲ್ಲನು
ನಿಮ್ಮ ಮೋಹಕ ಧನಿಯ ಕೊರಳಲಿ ಇಟ್ಟು ಕಾದಿರಿ ನನ್ನನು
...

ತಂದೆ ಮಾತ್ರವೆ ನೀವು ಗುರುವು ಸುಗಮ ಗೀತಾಚಾರ್ಯರು
ಕನ್ನಡದ ಕವಿತೆಯನು ಹಾಡುವಲೆಲ್ಲ ನೀವು ಅನಂತರು

ಅಳುವ ಕಡಲೊಳು ತೇಲಿ ಬರುತಲಿದೆ


Aluva kadalolu
Lyrics - Gopalakrishna Adiga
Music Director - Shimoga Subbanna
Singer - Shimoga Subbanna

...
 
 
ಅಳುವ ಕಡಲೊಳು ತೇಲಿ ಬರುತಲಿದೆ ನಗೆಯ ಹಾಯಿ ದೋಣಿ
ಬಾಳ ಗಂಗೆಯ ಮಹಾಪೂರದೊಳು ಸಾವಿನೊಂದು ವೇಣಿ
ನೆರೆತಿದೆ ಬೆರೆತಿದೆ ಕುಣಿವ ಮೊರೆವ ತೆರೆತೆರೆಗಳೋಣಿಯಲ್ಲಿ
ಜನನ ಮರಣಗಳ ಉಬ್ಬು ತಗ್ಗು ಹೊರಳುರುಳುವಾಟವಲ್ಲಿ

...
ಆಸೆ ಬೂದಿ ತಳದಲ್ಲು ಕೆರಳುತಿವೆ ಕಿಡಿಗಳೆನಿತೊ ಮರಳಿ
ಮುರಿದು ಬಿದ್ದ ಮನ ಮರದ ಕೊರಡೊಳು ಹೂವು ಹೂವು ಅರಳಿ
ಕೂಡಲಾರದೆದೆಯಾಳದಲ್ಲು ಕಂಡೀತು ಏಕ ಸೂತ್ರ
ಕಂಡುದುಂಟು ಬೆಸೆ ಬೆಸೆಗಳಲ್ಲು ಭಿನ್ನತೆಯ ವಿಕಟ ಹಾಸ್ಯ

ಎತ್ತರೆತ್ತರಕೆ ಏರುವಾ ಮನಕು ಕೆಸರ ಲೇಪ ಲೇಪ
ಹೊಳೆಯ ಕೊಳಚೆಯಲಿ ಮುಳುಗಿ ಕಂಡೆನೊ ಬಾನಿನೊಂದು ಪೆಂಪ
ತುಂಬುಗತ್ತಲಿನ ಬಸಿರನಾಳುತಿದೆ ಒಂದು ಅಗ್ನಿ ಪಿಂಡ
ತಮದಗಾಧ ಹೊನಲಲ್ಲು ಹೊಳೆಯುತಿದೆ ಸತ್ವವೊಂದಖಂಡ

ಇದನರಿತೆನೆಂದೆಯಾ? ಅರಿವು ಕಿರಣವನೇ ನುಂಗಿತೊಂದು ಮೇಘ
ಅ ಮುಗಿಲ ಬಸಿರನೆ ಬಗೆದು ಬಂತು ನವ ಕಿರಣ ಒಂದಮೋಘ
ಹಿಡಿದ ಹೊನ್ನೇ ಮಣ್ಣಹುದು ಮಣ್ಣೊಳು ಹೊಳೆದುದುಂಟು ಹೊನ್ನು
ಇದು ಹೀಗೆ ಎಂಬ ನಂಬುಗೆಯ ಊರುಗೋಲಿಲ್ಲ ಇನ್ನು ಮುನ್ನು

ಆಸೆ ಎಂಬ ತಳವೊಡೆದ ದೋಣಿಯಲಿ ದೂರ ತೀರ ಯಾನ
ಯಾರ ಲೀಲೆಗೋ ಯಾರೋ ಏನೋ ಗುರಿ ಇರದೆ ಬಿಟ್ಟ ಬಾಣ
ಇದು ಬಾಳು ನೋಡು ಇದು ತಿಳಿದೆನೆಂದರೂ ತಿಳಿದ ಧೀರನಿಲ್ಲ
ಹಲವುತನದ ಮೈ ಮರೆಸುವಾಟವಿದು ನಿಜವು ತೋರದಲ್ಲ

ಬೆಂಗಾಡು ನೋಡು ಇದು ಕಾಂಬ ಬಯಲು ದೊರಕಿಲ್ಲ ಆದಿ ಅಂತ್ಯ
ಅದ ತಿಳಿದೆನೆಂದ ಹಲರುಂಟು ತಣಿದೆ-ನೆಂದವರ ಕಾಣೆನಯ್ಯ
ಅರೆ ಬೆಳಕಿನಲ್ಲಿ ಬಾಳಲ್ಲಿ ಸುತ್ತಿ ನಾವೆಶ್ಟೋ ಮರೆತು ಮೆರೆದು
ಕೊನೆಗೆ ಕರಗುವೆವು ಮರಣ ತೀರ ಘನ ತಿಮಿರದಲ್ಲಿ ಬೆರೆತು

ಬಾ ಸವಿತಾ.... ಬಾ ಸವಿತಾ

Haadu - Baa Savitha
Rachane - Masti Venkatesha Iyengar
Singer - Jayashre K M

http://www.kannadaaudio.com/Songs/Bhaavageethe/BhaavaSangama/BaaSavithaBaaSavitha.ram
 
 
ಬಾ ಸವಿತಾ.... ಬಾ ಸವಿತಾ...

ಒಳಗಿನ ಕಣ್ಣನು ಮುಚ್ಚಿಸಿ ಒಮ್ಮೆ
ತಿಳಿವಿಗೆ ಬಣ್ಣವ ಹಚ್ಚಿಸಿ ಒಮ್ಮೆ
ಒಳಿತಲ್ಲದುದೇ ಒಳಿತೆಂಬುದರ ಚಳಕವೆಲ್ಲಕೆ
...
ವಿನಾಶವ ತಾ....

ನೆಲೆಯಿಂದ ಹೊರಟು ಅಲೆ ಅಲೆ.. ಅಲೆ ಅಲೆ..
ಛಲತೊಟ್ಟ ಮಲ್ಲವಾಹಿನಿ ಬಾ..
ನಿಲವಿಲ್ಲ ಜಗದಿ ಕತ್ತಲಿಗೆಂದು
ಗೆಲವನು ಸಾರುವ ಭಾಸವ ತಾ....

ಓಂ ತತ್ಸವಿತುರ್ವರೇಣ್ಯವೆ೦ಬೆವು
ಅಂತಲ್ಲದೆ ಬೇರೆಯದನು ನಂಬೆವು
ಪಂಥವ ಬೆಳಗಿಸಿ, ನಿರುಪಿಸಿ ಕಾಂಬೆವು
ಶಾಂತ ಸುಂದರ ಶಿವದಾಸವಿತಾ...

ಬಾರೊ ಸಾಧನಕೇರಿಗೆ

‎'Baaro Sadhanakerige' - another popular poem by Da Ra Bendre. SadhanaKeri is a little pond in Dharwad which is the inspiration for this poem. It is very well sung by M D Pallavi.

http://www.kannadaaudio.com/Songs/Bhaavageethe/ShravanadaSiriBaralide/Baaro.ram
 
 
ಬಾರೊ ಸಾಧನಕೇರಿಗೆ,
ಮರಳಿ ನಿನ್ನೀ ಊರಿಗೆ....

ಮಳೆಯು ಎಳೆಯುವ ತೇರಿಗೆ
ಹಸಿರು ಏರಿದೆ ಏರಿಗೆ
...
ಹಸಿರು ಸೇರಿದೆ ಊರಿಗೆ
ಹಸಿರು ಚಾಚಿದೆ ದಾರಿಗೆ
ನಂದನದ ತುಣುಕೊಂದು ಬಿದ್ದಿದೆ
ನೋಟ ಸೇರದು ಯಾರಿಗೆ?

ಮಲೆಯ ಮೊಗವೇ ಹೊರಳಿದೆ,
ಕೋಕಿಲಕೆ ಸವಿ ಕೊರಳಿದೆ,
ಬೇಲಿಗೂ ಹೂ ಬೆರಳಿದೆ,
ನೆಲಕೆ ಹರೆಯವು ಮರಳಿದೆ.
ಭೂಮಿತಾಯ್ ಒಡಮುರಿದು ಎದ್ದಳೊ,
ಶ್ರಾವಣದ ಸಿರಿ ಬರಲಿದೆ.

ಮೋಡಗಳ ನೆರಳಾಟವು,
ಅಡವಿ ಹೂಗಳ ಕೂಟವು,
ಕೋಟಿ ಜೆನ್ನೊಣಕೂಟವು,
ಯಕ್ಷಿ ಮಾಡಿದ ಮಾಟವು.
ನೋಡು ಬಾ ಗುಂಪಾಗಿ ಪಾತರ-
ಗಿತ್ತಿ ಕುಣಿಯುವ ತೋಟವು.

ಮರವು ಮುಗಿಲಿಗೆ ನೀಡಿದೆ.
ಗಿಡದ ಹೊದರೊಳು ಹಾಡಿದೆ
ಗಾಳಿ ಎಲ್ಲೂ ಆಡಿದೆ
ದುಗುಡ ಇಲ್ಲಿಂದೋಡಿದೆ
ಹೇಳು ಗೆಳೆಯಾ ಬೇರೆ ಎಲ್ಲೀ
ತರದ ನೋಟವ ನೋಡಿದೆ?

ಹಕ್ಕಿ ಹಾರುತಿದೆ ನೋಡಿದಿರಾ

Da Ra Bendre rachisida "hakki haarutide nodidira' in the melodious voice of Kasturi Shankar - http://www.kannadaaudio.com/Songs/Bhaavageethe/Naakutanti-DaRa-Bendre/Hakki.ram
 
 
ಇರುಳಿರುಳಳಿದು ದಿನ ದಿನ ಬೆಳಗೆ
ಸುತ್ತುಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ? /೧/
...

ಕರಿನರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣ-ಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ? /೨/

ನೀಲಮೇಘಮಂಡಲ-ಸಮ ಬಣ್ಣ!
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ!
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ? /೩/

ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ? /೪/

ಯುಗ-ಯುಗಗಳ ಹಣೆ ಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ? /೫/

ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳಿನೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ? /೬/

ಮುಟ್ಟಿದೆ ದಿಙ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೋ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ? /೭/

ಮೂಡುತ ರವಿ ರಂಗು ತಂದೈತೆ

Hope you will like this folk song "ಮೂಡುತ ರವಿ ರಂಗು ತಂದೈತೆ".

http://www.kannadaaudio.com/Songs/Folk/MoodutaRavi/MoodutaRavi.ram
 
 
ಮೂಡುತ ರವಿ ರಂಗು ತಂದೈತೆ,
ಓಡುತ ನದಿ ಹಾಡು ನೀಡೈತೆ,
ಬೆಟ್ಟದ ಮ್ಯಾಗೆ, ಕಟ್ಟೆಯ ಮ್ಯಾಗೆ,
ಗಾಳಿ ತೀಡೈತೆ.

...
ಬೆಳ್ಳಕ್ಕಿ ಸಾಲು ತೇಲಿ ತೇಲಿ ಪಲ್ಲಕ್ಕಿ ತೂಗೈತೆ
ಮಲ್ಲಿಗೆ ತೋಟ ಮಿಂಚಿ ಮಿಂಚಿ ಬೆಳ್ಳಗೆ ಹೊಳೆದೈತೆ
ಕಾಡಿನ ಜಾಡು ಕಂಪು ಇಂಪು
ಒಟ್ಟಿಗೆ ಕೂಡೈತೆ.

ಹಕ್ಕಿಯ ಮೇಳ ಕೂಗಿ ಕೂಗಿ ಹತ್ತಿರ ಕರೆದೈತೆ
ಕುಂಕುಮ ಧೂಳಿ ಮೇಲಕ್ಕೇರಿ ಸಿಂಧೂರ ಇಟ್ಟೈತೆ
ಕಣ್ಣಾರೆ ಕಂಡ ನೋಟದೂಟ
ಸಂತೋಷ ಸವಿದೈತೆ

ಸಂಜೆಯ ರಾಗಕೆ


Sanjeya Raagake Baanu kemperide
Rachane - Subbaraya Chakkodi
Haadiruvavaru - Narasimha Nayak

http://mio.to/9Mw4
 
ಸಂಜೆಯ ರಾಗಕೆ ಬಾನು ಕೆಂಪೇರಿದೆ
ತಿಂಗಳು ಮೂಡಿ ಬೆಳಕಿನ ಕೋಡಿ ಚೆಲ್ಲಾಡಿದೆ,
ಈಗ ರಂಗೇರಿದೆ ||

ಮರಗಿಡ ನೆಲದ ಮೇಲೆ ನೆರಳನು ಹಾಸಿದೆ
...
ಹೂಗಳ ದಳಗಳ ನಡುವೆ ನಿನ್ನದೇ ಬೆರಳಿದೆ ||

ಗಾಳಿಯ ಜೊತೆಯ ಗಂಧವು ನಿನ್ನನ್ನು ಸವರಿದೆ
ಒಳಗೂ ಹೊರಗೂ ವ್ಯಾಪಿಸಿ ಯೌವ್ವನ ಕೆರಳಿದೆ ||

ಕೊಳದಲಿ ಮೂಡಿದ ಬಿಂಬವು ಹೂಗಳ ಮರೆಸಿದೆ
ದಳದಲಿ ಎಂತಹ ಕನಸಿನ ಲೋಕವು ತೆರೆದಿದೆ

ಮುಗಿಲ ಮಾರಿಗೆ ರಾಗರತಿಯ


Rachane - Da Ra Bendre
Haadiruvavaru -
 
 
ಮುಗಿಲ ಮಾರಿಗೆ ರಾಗರತಿಯ ನಂಜ ಏರಿತ್ತ
ಆಗ ಸಂಜೆ ಆಗಿತ್ತ;
ನೆಲದ ಅಂಚಿಗೆ ಮಂಜಿನ ಮುಸುಕು ಹ್ಯಾಂಗೋ ಬಿದ್ದಿತ್ತ
ಗಾಳಿಗೆ ಮೇಲಕ್ಕೆದ್ದಿತ್ತ .

...
ಬಿದಿಗಿ ಚಂದ್ರನ ಚೊಗಚೀ-ನಗಿ-ಹೂ ಮೆಲ್ಲಗ ಮೂಡಿತ್ತ
ಮ್ಯಾಲಕ ಬೆಳ್ಳಿನ ಕೂಡಿತ್ತ;
ಇರುಳ ಹೆರಳಿನಾ ಅರಳಮಲ್ಲಿಗೀ ಜಾಳಿಗಿ ಹಾಂಗೆತ್ತ
ಸೂಸ್ಯಾವ ಚಿಕ್ಕಿ ಅತ್ತಿತ್ತ.

ಬೊಗಸಿಗಣ್ಣಿನಾ ಬಯಕೆಯ ಹೆಣ್ಣು ನೀರಿಗೆ ಹೋಗಿತ್ತ
ತಿರುಗಿ ಮನೀಗೆ ಸಾಗಿತ್ತ;
ಕಾಮಿ ಬೆಕ್ಕಿನ್ಹಾಂಗ ಭಾವೀ ಹಾದಿ ಕಾಲಾಗಸುಳಿತಿತ್ತ
ಎರಗಿ ಹಿಂದಕ್ಕುಳಿತಿತ್ತ.

ಮಳ್ಳಗಾಳಿ-ಸುಳಿ ಕಳ್ಳ ಕೈಲೆ ಸೆರಗನು ಹಿಡಿದಿತ್ತ
ಮತಮತ ಬೆರಗಿಲೆ ಬಿಡತಿತ್ತ;
ಒಂದ ಮನದ ಗಿಣಿ ಹಿಂದ ನೆಳ್ಳಿಗೆ ಬನ್ನಿಲೆ ಬರತಿತ್ತ
ತನ್ನ ಮೈಮರ ಮರತಿತ್ತ

ಗಮ ಗಮಾ ಗಮ್ಮಾಡಿಸ್ತಾವ ಮಲ್ಲಿಗಿ

Ghama Ghama Ghammadistava malligi
Rachane - Da Ra Bendre
Haadiruvavaru - Sangeetha Katti

http://www.youtube.com/watch?v=b6CoXR_nzgs
Sowmya Shree Sandeep, found a video of your singing in NEKK - loved your singing - http://www.youtube.com/watch?v=0h0P4v3jHF0
 
 
ಗಮ ಗಮಾ ಗಮ್ಮಾಡಿಸ್ತಾವ ಮಲ್ಲಿಗಿ |
ನೀ ಹೊರಟಿದ್ದೀಗ ಎಲ್ಲಿಗೀ ?

ತುಳುಕ್ಯಾಡತಾವ ತೂಕಡಿಕಿ
ಎವಿ ಅಪ್ಪತಾವ ಕಣ್ಣ ದುಡುಕಿ
...
ಕನಸು ತೇಲಿ ಬರತಾವ ಹುಡುಕಿ ||
ನೀ ಹೊರಟಿದ್ದೀಗ ಎಲ್ಲಿಗೀ ?

ಚಿಕ್ಕಿ ತೋರಿಸ್ತಾವ ಚಾಚಿ ಬೆರಳ
ಚಂದ್ರಮ ಕನ್ನಡಿ ಹರಳ
ಮನ ಸೋತು ಆಯಿತು ಮರುಳ ||
ನೀ ಹೊರಟಿದ್ದೀಗ ಎಲ್ಲಿಗೀ ?

ನೆರಳಲ್ಲಾಡತಾವ ಮರದ ಬುಡsಕ
ಕೆರಿ ತೆರಿ ನೂಗತಾವ ದಡಕs
ಹೀಂಗ ಬಿಟ್ಟು ಎಲ್ಲಿ ನನ್ನ ನಡsಕ
ನೀ ಹೊರಟಿದ್ದೀಗ ಎಲ್ಲಿಗೀ ?

ನನ್ನ ನಿನ್ನ ಒಂದತನದಾಗ
ಹಾಡು ಹುಟ್ಟಿ ಒಂದು ಮನದಾಗ
ಬೆಳದಿಂಗಳಾತು ಬನದಾಗ ||
ನೀ ಹೊರಟಿದ್ದೀಗ ಎಲ್ಲಿಗೀ ?

ಬಂತ್ಯಾಕ ನಿನಗ ಇಂದ ಮುನಿಸು
ಬೀಳಲಿಲ್ಲ ನನಗ ಇದರ ಕನಸು
ರಾಯ ತಿಳಿಯಲಿಲ್ಲ ನಿನ್ನ ಮನಸು ||
ನೀ ಹೊರಟಿದ್ದೀಗ ಎಲ್ಲಿಗೀ ?

ಗಜಮುಖನೆ ಗಣಪತಿಯೇ


Ganeshana habba without the song "Gajamukhane Ganapathiye" is like celebrating Ugadi habba without listening to "yuga yugadi kaledaroo". If you haven't listened to this yet today, here it is.....

Song - Gajamukhane Ganapathiye
Lyrics - Vijayanarasimha
Music - M Ranga Rao
...
 
 
ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪಶಾಂತಯೇತ್

ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೆ
...

ಭಾದ್ರಪದ ಶುಕ್ಲದಾ ಚೌತಿಯಂದು
ನೀ ಮನೆಮನೆಗೂ ದಯಮಾಡಿ ಹರಸು ಎಂದು
ನಿನ್ನ ಸನ್ನಿಧಾನದಿ ತಲೆಬಾಗಿ ಕೈಯ್ಯ ಮುಗಿದು
ಬೇಡುವಾ ಭಕ್ತರಿಗೆ ನೀ ದಯಾಸಿಂಧು

ಈರೇಳು ಲೋಕದ ಅಣುವಣುವಿನಾ
ಇಹಪರದಾ ಸಾಧನಕೆ ನೀ ಕಾರಣ
ನಿನ್ನೊಲುಮೆ ನೋಟದಾ ಒಂದು ಹೊನ್ನ ಕಿರಣಾ
ನೀಡಿದರೆ ಸಾಕಯ್ಯಾ ಜನ್ಮ ಪಾವನ

ಪಾರ್ವತಿ ಪರಶಿವನಾ ಪ್ರೇಮ ಪುತ್ರನೆ
ಪಾಲಿಸುವಾ ಪರದೈವಾ ಬೇರೆ ಕಾಣೆ
ಪಾಪದ ಪಂಕದಲಿ ಪದುಮ ಎನಿಸು ಎನ್ನ
ಪಾದ ಸೇವೆ ಒಂದೇ ಧರ್ಮ ಸಾಧನ

ಶರಣು ಶರಣಯ್ಯ ಶರಣು ಬೆನಕ


Gowri Ganesha habbada sambhrama - reminds me of the songs that blared from the temple next to our house in Bangalore.

Song - Sharanu Sharanayya sharanu benaka
Lyrics - Vijayanarasimha
Music - M Ranga Rao
...
 
 
ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲ ಸುಖ
ತಂದೆ ಕಾಯೊ ನಮ್ಮ ಕರಿಮುಖ

...
ಎಲ್ಲಾರು ಒಂದಾಗಿ ನಿನ್ನ
ನಮಿಸಿ ನಲಿಯೋದು ನೋಡೋಕೆ ಚೆನ್ನ
ಗರಿಕೆ ತಂದರೆ ನೀನು ಕೊಡುವೆ ವರವನ್ನ
ಗತಿ ನೀನೆ ಗಣಪನೆ ಕೈ ಹಿಡಿಯೊ ಮುನ್ನ

ಸೂರ್ಯನೆದುರಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಓಡುವುದು ಭೀತಿ
ನೀಡಯ್ಯ ಬಾಳೆಲ್ಲ ಬೆಳಗುವ ಶಕುತಿ
ತೋರಯ್ಯ ನಮ್ಮಲ್ಲಿ ನಿನ್ನಯ ಪ್ರೀತಿ

ಬೆನಕ ಬೆನಕ ಏಕದಂತ
ಪಚ್ಚೆಕಲ್ಲು ಪಾಣಿಮೆಟ್ಲು
ಒಪ್ಪುವ ವಿಘ್ನೇಶ್ವರ ನಿನಗೆ
ಇಪ್ಪತ್ತೊಂದು ನಮಸ್ಕಾರಗಳು

ಹತ್ತು ವರ್ಷದ ಹಿಂದೆ ಮುತ್ತೂರ ತೇರಿನಲಿ

Theme - Hendathi
Song - hattu varshada hinde
Lyrics - K S Narasimha Swamy
Singer - Medhini Dutt

http://www.kannadaaudio.com/Songs/Bhaavageethe/Navaoallava/Hattu.ram
 
 
ಹತ್ತು ವರ್ಷದ ಹಿಂದೆ ಮುತ್ತೂರ ತೇರಿನಲಿ
ಅತ್ತಿತ್ತ ಸುಳಿದವರು ನೀವಲ್ಲವೇ
ಹತ್ತಿರದ ಹೆಣ್ಣೆಂದು ಮತ್ತೆ ಮುತ್ತೂರಿನಲಿ
ಒಪ್ಪಿ ಕೈ ಹಿಡಿದವರು ನೀವಲ್ಲವೇ

...
ಬೆಟ್ಟಗಳಾ ಬೆನ್ನಿನಲಿ ಬೆಟ್ಟಗಳಾ ದಾರಿಯಲಿ
ಕಟ್ಟಿಕೊಂಡಲೆದವರು ನೀವಲ್ಲವೇ
ತಿಟ್ಟಿನಲ್ಲಿ ಮುಂದಾಗಿ ಕಣಿವೆಯಲಿ ಹಿಂದಾಗಿ
ನಗುನಗುತಾ ನಡೆದವರು ನೀವಲ್ಲವೇ

ಬಾಗಿಲಿಗೆ ಬಂದವರು ಬೇಗ ಬಾ ಎಂದವರು
ಬರಬೇಕೆ ಎಂದವರು ನೀವಲ್ಲವೇ
ನೋಡು ಬಾ ಎಂದವರು ಬೇಡ ಹೋಗೆಂದವರು
ಎಂದಿಗೂ ಬಿಡದವರು ನೀವಲ್ಲವೇ

ಸೆರಗೆಳೆದು ನಿಲ್ಲಿಸಿದವರು, ಜಡೆಯೆಳೆದು ನೋಯಿಸಿದವರು
ಎತ್ತರದ ಮನೆಯವರು ನೀವಲ್ಲವೇ
ನೀನೆ ಬೇಕೆಂದವರು, ನೀನೆ ಸಾಕೆಂದವರು
ಬೆಟ್ಟದಲಿ ನಿಂತವರು ನೀವಲ್ಲವೇ

ಕೈಗೆ ಬಳೆಯೇರದೇ ಅಯ್ಯೋ ನೋವೆಂದಾಗ
ಮಹಡಿಯಿಂದಿಳಿದವರು ನೀವಲ್ಲವೇ
ಬಳೆಗಾರ ಶೆಟ್ಟಿಯನು ಗದರಿಸಿಕೊಂಡವರು
ಬೆತ್ತವನು ತಂದವರು ನೀವಲ್ಲವೇ

ಹೊನ್ನು ಹೊಳೆ ನೀನೆಂದು, ಮುತ್ತು ಮಳೆ ನೀನೆಂದು
ಹಾಡಿ ಕುಣಿದವರು ನೀವಲ್ಲವೇ
ಮಲೆನಾಡ ಹೆಣ್ಣೆಂದು, ಒಲವಿತ್ತ ಹೆಣ್ಣೆಂದು
ಏನೇನೋ ಬರೆದವರು ನೀವಲ್ಲವೇ

ಚಂದಿರನ ಮಗಳೆಂದು ಚಂದ್ರಮುಖಿ ನೀನೆಂದು
ಹೊಸ ಹೆಸರನಿಟ್ಟವರು ನೀವಲ್ಲವೇ
ಮಲ್ಲಿಗೆಯ ದಂಡೆಯನು ತುರುಬಿಗೆ ಹಿಡಿದವರು
ತುಟಿಗೆ ತುಟಿ ತಂದವರು ನೀವಲ್ಲವೇ

ಬಡತನವೊ ಸಿರಿತನವೊ ಯಾರಿರಲಿ ಎಲ್ಲಿರಲಿ
ದೊರೆಯಾಗಿ ಮೆರೆವವರು ನೀವಲ್ಲವೇ
ಗಂಡನಿಗೆ ಒಪ್ಪಾಗಿ, ಕಂದನಿಗೆ ದಿಕ್ಕಾಗಿ
ಪಯಣದಲಿ ಜೊತೆಯಾಗಿ ನಾನಿಲ್ಲವೇ

ನಾನು ಬಡವಿ ಆತ ಬಡವ

Theme - Hendathi
Song - Naanu badavi aata badava
Lyrics - Da Ra Bendre

http://www.kannadaaudio.com/Songs/Bhaavageethe/Naakutanti-DaRa-Bendre/Naanu.ram
 
 
ನಾನು ಬಡವಿ ಆತ ಬಡವ
ಒಲವೆ ನಮ್ಮ ಬದುಕು
ಬಳಸಿಕೊಂಡೆವದನೆ ನಾವು
ಅದಕು ಇದಕು ಎದಕು

...
ಹತ್ತಿರಿರಲಿ ದೂರವಿರಲಿ
ಅವನೆ ರಂಗಸಾಲೆ
ಕಣ್ಣು ಕಟ್ಟುವಂಥ ಮೂರ್ತಿ
ಕಿವಿಗೆ ಮೆಚ್ಚಿನೋಲೆ

ಚಳಿಗೆ ಬಿಸಿಲಿಗೊಂದೆ ಹದ
ಅವನ ಮೈಯ ಮುಟ್ಟೆ
ಅದೇ ಗಳಿಗೆ ಮೈಯ ತುಂಬಾ
ನನಗೆ ನವಿರು ಬಟ್ಟೆ

ಆತ ಕೊಟ್ಟ ವಸ್ತು ಒಡವೆ
ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳಬಂದಿ
ಕೆನ್ನೆ ತುಂಬಾ ಮುತ್ತು

ಕುಂದು ಕೊರತೆ ತೋರಲಿಲ್ಲ
ಬೇಕು ಹೆಚ್ಚಿಗೇನು?
ಹೊಟ್ಟೆಗಿತ್ತ ಜೀವ ಫಲವ
ತುಟಿಗೆ ಹಾಲು ಜೇನು.

ನನ್ನವಳು ನನ್ನೆದೆಯ ಹೊನ್ನಾಡನಾಳುವಳು


A beautiful composition by K S Narasimhaswamy.
Theme - Hendathi
Song - Nannavalu Nannedeya
Lyrics - K S Narasimha Swamy
Album - Iruvanthige
...
 
 
ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ||ಪ||

ಹೊಳೆಯ ಸುಳಿಗಳಿಗಿಂತ ಆಳಗಣ್ಣಿನ ಚೆಲುವು
ಅವಳೊಮ್ಮೆ ಹೆರಳ ಕೆದರಿ ಕಪ್ಪುಗುರುಳನ್ನು
...
ಬೆನ್ನ ಮೇಲೆಲ್ಲ ಹರಡಿದರೆ…
ದೂರದಲಿ, ಗಿರಿಯ ಮೇಲೆ ಇಳಿದಂತೆ ಇರುಳ ಮಾಲೆ
ಇಳಿದಂತೆ ಇರುಳ ಮಾಲೆ.

ಕರೆದಾಗ ತೌರು ಮನೆ, ನೆನೆದಾಗ ನನ್ನ ಮನೆ
ಹಳ್ಳಿಯೆರಡರ ಮುದ್ದು ಬಳ್ಳಿ ಅವಳು
ಮುಚ್ಚು ಮರೆ ಇಲ್ಲದೆ ಅಚ್ಚ ಮಲ್ಲಿಗೆಯಂತೆ
ಅರಳುತಿಹುದು ಅವಳ ಬದುಕು
ಬಂಗಾರದೊಡವೆಗಳ ಬಯಸಿಲ್ಲ ಮನಸಿನಲಿ
ಬಂಗಾರದಂತ ಹುಡುಗಿ
ನನ್ನೊಡವೆ, ನನ್ನ ಬೆಡಗಿ.

ಹಸಿರು ಸೀರೆಯನುಟ್ಟು, ಕೆಂಪು ಬಳೆಗಳ ತೊಟ್ಟು
ತುಂಬು ದನಿಯಲಿ ಕರೆವಳೆನ್ನ ಚೆಲುವೆ
ಹಣೆಯನಾಳುವುದು ಅವಳ ಕುಂಕುಮದ ನಿಡುವಟ್ಟು
ಲಕ್ಷ್ಮಿ ಅವಳೆನ್ನ ಮನೆಗೆ
ನಮಗಿದುವೇ ಸೊಗಸು ಬದುಕಿನ ಬಣ್ಣಗಳಾ ಸಂತೆ
ನಮಗಿಲ್ಲ ನೂರು ಚಿಂತೆ,ನಾವು ಗಂಧರ್ವರಂತೆ
ನಾವು ಗಂಧರ್ವರಂತೆ.

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ

Today's song - the ever famous 'hendathiyobbalu manayolagiddare'.
Theme - Hendathi
Song - hendathiyobbalu manayolagiddare
Lyrics - K S Narasimha Swamy
Singer - S Ashwath

http://www.kannadaaudio.com/Songs/Bhaavageethe/BhaavaSangama/HendathiYobbaluManai.ram
 
 
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ |
ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ ||

...
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ಹುಣ್ಣಿಮೆ, ಹೋಳಿಗೆ ದೀಪ |
ಹೆಂಡತಿ ತವರಿಗೆ ಹೊರಡುವೆನೆಂದರೆ
ನನಗಿಲ್ಲದ ಕೋಪ ||

ಭರಣಿಯ ತೆರೆದರೆ ಅರಿಶಿನ ಕುಂಕುಮ
ಅವಳದು ಈ ಸಂಪತ್ತು |
ತುಟಿಗಳ ತೆರೆದರೆ ತುಳುಕುವುದಿ೦ಪಿನ
ಎರಡೋ ಮೂರೋ ಮುತ್ತು ||

ಕೈ ಹಿಡಿದವಳು, ಕೈ ಬಿಡದವಳು
ಮಾಡಿದಡಿಗೆಯೇ ಚಂದ,
ನಾಗರ ಕುಚ್ಚಿನ ನಿಡುಜಡೆಯವಳು,
ಈಕೆ ಬಂದುದೆಲ್ಲಿಂದ?

ಚಂದಿರನೂರಿನ ಅರಮನೆಯಿಂದ
ಬಂದವರೀಗೆಲ್ಲಿ?
ಬೆಳ್ಳಿಯ ಕೋಟೆಯ ಬಾಗಿಲಿನಿಂದ
ಬಂದವರೀಗೆಲ್ಲಿ?

ಹೆಂಡತಿಯೊಂದಿಗೆ ಬಡತನ ದೊರೆತನ
ಏನೂ ಭಯವಿಲ್ಲ |
ಹೆಂಡತಿಯೊಲುಮೆಯ ಭಾಗ್ಯವನರಿಯದ
ಗಂಡಿಗೆ ಜಯವಿಲ್ಲ

ಬಡವನಾದರೆ ಏನು ಪ್ರಿಯೆ

Theme - Hendathi
Song - Badavanadare enu priye
Lyrics - Sathyananda Pathrota
Singer - S Ashwath

http://www.kannadaaudio.com/Songs/Bhaavageethe/Madhyama-C.Ashwath/Badavanadare.ram
 
 
ಬಡವನಾದರೆ ಏನು ಪ್ರಿಯೆ ಕೈ ತುತ್ತು ತಿನಿಸುವೆ
ಎದೆಯ ತುಂಬ ಒತ್ತಿಕೊಂಡು ಮುತ್ತು ಮಳೆಯ ಸುರಿಸುವೆ

ನನ್ನ ಎದೆಯ ರಾಜ್ಯದಲ್ಲಿ ನೀನು ರಾಣಿಯಾಗುವೆ
ಪುಟ್ಟ ಗುಡಿಸಲಲ್ಲಿ ನಿನ್ನ ಪಟ್ಟದರಸಿ ಮಾಡುವೆ
...

ಉಳ್ಳವರ ಎದೆಗೆ ಒದ್ದು ಮೈ ಮಾನ ಮುಚ್ಚುವೆ
ರೆಟ್ಟೆ ಮೇಲೆ ಹೊತ್ತು ನಿನ್ನ ಜಗವ ಸುತ್ತಿ ತಣಿಸುವೆ

ಬೆವರು ಹರಿಸಿ ಹೂವ ಬೆಳೆಸಿ ಮುಡಿಯಲಿಟ್ಟು ನಗಿಸುವೆ
ಭುಜಕೆ ಭುಜವ ಹಚ್ಚಿ ನಿಂತು ತೋಳುಬಂಧಿ ತೊಡಿಸುವೆ

ಹರಿವ ನದಿಗೆ ಅಡ್ಡ ನಿಂತು ನಿನಗೆ ದಾರಿ ಮಾಡುವೆ
ಬಿಸಿಲು ಮಳೆಯ ಚಳಿಯ ನುಂಗಿ ನೆರಳು ಬೆಳಕು ಆಗುವೆ

ನಾಡ ದೇವಿಯೇ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯ

Song - Naada deviye kande ninna madilalli entha drushya
Lyrics - K S Nissar Ahmed
Singer - S Ashwath & Kasturi Shankar

http://www.kannadaaudio.com/Songs/Patriotic/Karunada-Thaayi-Sada-Chinmayi/Nada-Deviye.ram
 
 
ನಾಡ ದೇವಿಯೇ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯ;
ನೋವು ನಗೆಯ ಸಮ್ಮಿಶ್ರದಲ್ಲಿ ಎದೆಯಾಯಿತದಕೆ ವಶ್ಯ.
ಒಂದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇದ ತಾಯಿ!
ಒಂದೇ ನೆಲದ ರಸ ಹೀರಲೇನು? ಸಿಹಿ, ಕಹಿಯ ರುಚಿಯ ಕಾಯಿ,
ನಾಡ ದೇವಿಯೇ ...
...

ಕತ್ತಲಲ್ಲಿ ಕಂಗೆಟ್ಟು ಎಡವಿ ತಡವರಿಸುತಿರುವ ಮಂದಿ -
ಕಡೆಗಣಿಸುತವರ ನಡೆದಿರುವನೊಬ್ಬ ಸ್ವಹಿತಕ್ಕೆ ಹಿಡಿದು ದೊಂದಿ.
ಸಂಸ್ಕಾರವಿಲ್ಲ ಹೆಣಕೆಂದು ತಲೆಗೆ ಕೈ ಹೊತ್ತ ಬಡವನೊಬ್ಬ;
ಇನ್ನೊಬ್ಬ ತಾನು ಆಚರಿಸುತಿರುವ ವೈಭವದ ಹುಟ್ಟುಹಬ್ಬ.
ನಾಡ ದೇವಿಯೇ ...

ಅನ್ನವಿರದ ಹಸುಳೆಗಳ ತಬ್ಬಿ ಅಳುತಿರುವ ತಾಯ ಕಂಡೆ;
ದುಃಖಪೂರ ಉಕ್ಕುಕ್ಕಿ ಮೊರೆಯೆ, ಕೊಚ್ಚಿತ್ತು ಬಾಳ ದಂಡೆ.
ಹೊಟ್ಟೆ ಹೇಳಿಗೆಯ ಬಿಚ್ಚಿ, ಹಸಿವ ಹಾವನ್ನು ಚುಚ್ಚಿ ಕೆಣಕಿ -
ಯುಕ್ತಿ ರಾಗದಲಿ ಕುಣಿಸಿ, ದಣಿಸಿ, ನಲಿದಿಹರು ಹಲರು ಬದುಕಿ.
ನಾಡ ದೇವಿಯೇ ...

ನರನನ್ನೆ ಗಾಳವಾಗಿಸುತ ಬಾಳ ನೀರಲ್ಲಿ, ನಲಿವ ನರಿಗೆ -
ನಾವೊಂದು ಎನುವ ಸತ್ಯಕ್ಕೆ ಅಡ್ಡಗಾಲೆಳೆವ ನಾಡಿನರಿಗೆ,
ಎಚ್ಚರವ ನೀಡಿ ತಿದ್ದುತ್ತಲಿರಲಿ ಕವಿ ಭಾವವೆಂಬ ಬಡಿಗೆ,
ತಾಯಿ ಭಾರತಿಯೆ, ಇದುವೇ ನಿನಗೆ ನಾ ಸಲಿಸಲಿರುವ ಕೊಡುಗೆ.
ನಾಡ ದೇವಿಯೇ ...

ಗುರಿ ಮುಟ್ಟುತಿರಲಿ ಈ ಜೀವ ತಾನು, ಹಿಡಿದೊಂದು ದಿಟದ ದಾರಿ -
ಮರೆಯದಂತೆ ಹೊರಿಸಿರುವ ಋಣವ, ಕೃತಿಯಲ್ಲಿ ಅದನು ಸಾರಿ.
ನಿನ್ನೊಲವ ತೈಲ ನನ್ನೆದೆಯೊಳಿರಲಿ; ಬೆಳಗಿರಲಿ ಬಾಳ ಬತ್ತಿ.
ಕೊನೆ ಕಾಣಲಮ್ಮ ಅನುಭವದಿ ಮಾಗಿ, ನಿನ್ನಡಿಗೆ ಬಾಗಿ ನೆತ್ತಿ.

ಅಮ್ಮ ನಿನ್ನ ಎದೆಯಾಳದಲ್ಲಿ


Theme of the week - ತವರಿನ ಹಾಡುಗಳು
Haadu - Amma ninna edeyaladalli
Rachane - B R Lakshman Rao
Singer - M D Pallavi

 
 
ಅಮ್ಮ ನಿನ್ನ ಎದೆಯಾಳದಲ್ಲಿ ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು |
ಕಡಿಯಲೋಲ್ಲೆ ನೀ ಕರುಳ ಬಳ್ಳಿ ಒಡಮೂಡುತಿರುವ ತಾಯೆ
ಬಿಡದ ಭುವಿಯ ಮಾಯೆ ||

...
ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ ಅಡಗಲಿ ಎಷ್ಟು ದಿನ
ದೂಡು ಹೊರಗೆ ನನ್ನ |
ಓಟ ಕಲಿವೆ ಒಳನೋಟ ತಿಳಿವೆ ನಾ ಕಲಿವೆ ಊರ್ಧ್ವಗಮನ
ಓ ಅಗಾಧ ಗಗನ ||

ಮೇಲೆ ಹಾರಿ ನಿನ್ನ ಸೆಳೆತ ಮೀರಿ ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ |
ಇಂಧನ ತೀರಲು ಬಂದೇ ಬರುವೆ ಮತ್ತೆ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ ||

ತೌರ ಸುಖದೊಳಗೆನ್ನ


Theme of the week - ತವರಿನ ಹಾಡುಗಳು
Haadu - Toura Sukhadolenna
Rachane - K S Narasimha Swamy

This song also known as 'hendatiya kaagada' elegantly describes how a wife misses her husband while in her 'tavaru mane'.

http://www.youtube.com/watch?v=1eFvxy0XCXU
 
ತೌರ ಸುಖದೊಳಗೆನ್ನ ಮರೆತಿಹಳು ಎನ್ನದಿರಿ
ನಿಮ್ಮ ಪ್ರೇಮವ ನೀವೇ ಒರೆಯನಿಟ್ಟು,
ನಿಮ್ಮ ನೆನಸೇ ನನ್ನ ಹಿಂಡುವುದು ಹಗಲಿನಲಿ
ಇರುಳಿನಲಿ ಕಾಣುವುದು ನಿಮ್ಮ ಕನಸು.

...
ಬೃಂದಾವನದ ಹಣೆಗೆ ಕುಂಕುಮವನಿಡುವಾಗ
ಕಾಣುವುವು ಶ್ರೀತುಲಸಿ ಕೃಷ್ಣ ತುಲಸಿ;
ನೀಲಾಂಬರದ ನಡುವೆ ಚಂದಿರನು ಬಂದಾಗ
ರೋಹಿಣಿಯು ಬೆಳಗುವಳು ಸನ್ನಿಧಿಯಲಿ.

ತಾಯಡಿಗೆ ರುಚಿಯೆಂದು ನಾನಿಲ್ಲಿ ಕುಳಿತಿಲ್ಲ;
ಇನ್ನು ತಂಗಿಯ ಮದುವೆ ತಿಂಗಳಿಹುದು.
ತೌರ ಪಂಜರದೊಳಗೆ ಸೆರೆಯಾದ ಗಿಣಿಯಲ್ಲ,
ಐದು ತಿಂಗಳ ಕಂದ ನಗುತಲಿಹುದು.

ಕಣ್ಣೆದುರಿಗಿರುವಾಗ ನಿಮ್ಮ ಮನವುಕ್ಕುವುದು
ಕ್ಷೀರಸಾಗರದಂತೆ ಶಾಂತಿಯೊಳಗೆ.
ಕಣ್ಣ ಮರೆಯಾದಾಗ ಹೂವೆಲ್ಲ ಹಾವೆಂದು
ಬಿರುನುಡಿಯನಾಡುವುದು ನಿಮಗೆ ತರವೆ?

ಚಿತ್ರದುರ್ಗದ ರೈಲು ನಿತ್ಯವೂ ಓಡೋಡಿ
ಮೈಸೂರ ಸೇರುವುದು ನಾನು ಬಲ್ಲೆ.
ನಾಳೆ ಮಂಗಳವಾರ; ಮಾರನೆಯ ದಿನ ನವಮಿ;
ಆಮೇಲೆ ನಿಲ್ಲುವೇನೆ ನಾನು ಇಲ್ಲೇ?

ಸೋಬಲಕ್ಕಿಯನಿಟ್ಟು ಹೂಮುಡಿಸಿ ಕಳುಹುವರು,
ಕಂದನಿಗೆ ಹೊಸ ಜರಿಯ ಲಂಗವುಡಿಸಿ.
ತಂದೆಯವರೇ ಬಂದು ತಪ್ಪಾಯಿತೆನ್ನುವರು;
ಹೆಣ್ಣ ಹೆತ್ತವರನ್ನು ದೂರಬೇಡಿ.

ಮರೆತಿಹಳು ಎನ್ನದಿರಿ, ಕಣ್ಮರೆಯ ತೋಟದಲಿ
ಅಚ್ಚಮಲ್ಲಿಗೆಯರಳು ಬಿರಿಯುತಿಹುದು.
ಬಂದುಬಿಡುವೆನು ಬೇಗ, ಮುನಿಯದಿರಿ, ಕೊರಗದಿರಿ,
ಚುಚ್ಚದಿರಿ ಮೊನೆಯಾದ ಮಾತನೆಸೆದು.

ಭಾಗ್ಯಾದ ಬಳೆಗಾರ ಹೋಗಿಬಾ ನನ್ ತವರಿಗೆ

Theme of the week - ತವರಿನ ಹಾಡುಗಳು
Genre - Folk song
Haadu - Bhagyada balegara
An eternal favorite of mine, I can never get tired of listening to this song.

http://www.kannadaaudio.com/Songs/Folk/BhagyadaBalegara/BhagyadaBalegara.ram
 
 
ಭಾಗ್ಯಾದ ಬಳೆಗಾರ ಹೋಗಿಬಾ ನನ್ ತವರಿಗೆ
ನಿನ್ನ ತವರೂರ ನಾನೇನು ಬಲ್ಲೆನು
ಗೊತ್ತಿಲ್ಲ ಎನಗೆ ಗುರಿ ಇಲ್ಲ ಎಲೆಬಾಲೆ
ತೋರಿಸು ಬಾರೆ ತವರೂರ

...
ಬಾಳೆ ಬಲಕ್ಕೆ ಬೀಡು, ಸೀಬೆ ಎಡಕ್ಕೆ ಬೀಡು
ನಟ್ಟ ನಡುವೇಲಿ ನೀ ಹೋಗು ಬಳೆಗಾರ
ಅಲ್ಲಿಹುದೆನ್ನ ತವರೂರು
ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ ತವರೂರ

ಹಂಚಿನ ಮನೆ ಕಾಣೊ ಕಂಚಿನ ಕದ ಕಾಣೊ
ಇಂಚಾಡೊವೆರಡು ಗಿಳಿ ಕಾಣೊ ಬಳೆಗಾರ
ಅಲ್ಲಿಹುದೆನ್ನ ತವರೂರು
ಮುತ್ತೈದೆ ಎಲೆ ಹೆಣ್ಣೆ ತೋರು ಬಾರೆ ತವರೂರ

ಆಲೆ ಆಡುತ್ತಾವೆ ಗಾಣ ತಿರುಗುತ್ತಾವೆ
ನವಿಲು ಸಾರಂಗ ನಲಿದಾವೆ ಬಳೆಗಾರ
ಅಲ್ಲಿಹುದೆನ್ನ ತವರೂರು
ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ ತವರೂರ

ಮುತ್ತೈದೆ ಹಟ್ಟೀಲಿ ಮುತ್ತಿನ ಚಪ್ರ ಹಾಕಿ
ನಟ್ಟ ನಡುವೇಲಿ ಪಗಡೆಯ ಆಡುತಾಳೆ
ಅವಳೆ ಕಣೊ ನನ್ನ ಹಡೆದವ್ವ
ಮುತ್ತೈದೆ ಎಲೆ ಹೆಣ್ಣೆ ತೋರು ಬಾರೆ ತವರೂರ

ಆಚ್ಚ ಕೆಂಪಿನ ಬಳೆ ಹಸಿರು ಗೀರಿನ ಬಳೆ
ನನ್ನ ಹಡೆದವ್ಗೆ ಬಲು ಆಸೆ ಬಳೆಗಾರ
ಕೊಂಡ್ ಹೋಗು ಎನ್ನ ತವರೀಗೆ
ಭಾಗ್ಯಾದ ಬಳೆಗಾರ ಹೋಗಿಬಾ ನನ್ ತವರಿಗೆ

ಪಂಚಮಿ ಹಬ್ಬ ಉಳಿದಾವ ದಿನ ನಾಕ


ಇಂದು ನಾಗರ ಪಂಚಮಿ - ತನ್ನಿರೆ ಹಾಲ ತನಿ ಎರೆಯೋಣ, ಸೋದರನ ಬೆನ್ನಿಗೆ ತಂಪೆರೆಯೋಣ
Here is a folk song depicting the brother-sister bonding.
 
Theme of the week - ತವರಿನ ಹಾಡುಗಳು
Haadu - Panchmi Habba
...
 
 
ಪಂಚಮಿ ಹಬ್ಬ ಉಳಿದಾವ ದಿನ ನಾಕ
ಅಣ್ಣ ಬರಲಿಲ್ಲ ಯಾಕ ಕರಿಲಾಕ

ನನ್ನ ತವರೂರು ಗೋಕುಲ ನಗರ
ನನ್ನ ಅಣ್ಣಯ್ಯ ದೊಡ್ಡ ಸಾಹುಕಾರ
...
ಮನಿ ಎಂಥದ್ದು ರಾಜಮಂದಿರ
ಹ್ಯಾಂಗ ಆದೀತ ಬಿಟ್ಟು ಇರಲಾಕ

ಮುತ್ತಿನಂತಾಕಿ ಆಕಿ ನನ್ನ ಅತ್ತೀಗಿ
ಪ್ರೀತಿ ಭಾಳ ನನ್ನ ಮ್ಯಾಲ ಅವಳೀಗಿ
ಬಿಟ್ಟಳೇನಮ್ಮ ಬಿಟ್ಟು ಇರಲಾಕ
ಅಣ್ಣ ಬರಲಿಲ್ಲ ಯಾಕ ಕರಿಲಾಕ

ನನ್ನ ತವರಲ್ಲಿ ಪಂಚಮಿ ಭಾರಿ
ಮಣ ತೂಕಾದ ಬೆಲ್ಲ ಕೊಬ್ಬಾರಿ
ಎಳ್ಳು ಅವಲಕ್ಕಿ ತಂಬಿಟ್ಟು ಸೂರಿ
ನಾನು ತಿನುವಾಕಿ ಅಲ್ಲೆ ಮನ ಸಾರಿ
 

ಶ್ರಾವಣ ಬಂತು ಕಾಡಿಗೆ


ಶ್ರಾವಣ ಮಾಸದ ಮೊದಲನೆಯ ದಿನ - ಕೇಳಿ ಆನಂದಿಸಿ - "ಶ್ರಾವಣ ಬಂತು"

Theme of the week - ಪ್ರಕೄತಿ ಗೀತೆಗಳು
Haadu - Shravana bantu
Rachane - Da Ra Bendre
...
Haadiruvavaru - C Ashwath

There seems to be an issue with the KannadaAudio link. You will have to skip past the first 10 - 15 seconds for the link to work.
http://www.kannadaaudio.com/Songs/Bhaavageethe/Shraavana/Shraa.ram
 
 
ಶ್ರಾವಣ ಬಂತು ಕಾಡಿಗೆ ಬಂತು ನಾಡಿಗೆ ಬಂತು ಬೀಡಿಗೆ
ಬಂತು ಶ್ರಾವಣ ಒ ಬಂತು ಶ್ರಾವಣ

ಕಡಲಿಗೆ ಬಂತು ಶ್ರಾವಣ ಕುಣಿದ್ ಹಾಂಗ ರಾವಣ
ಕುಣಿದಾವ ಗಾಳಿ ಭೈರವನ ರೂಪ ತಾಳಿ
...

ಶ್ರಾವಣ ಬಂತು ಘಟ್ಟಕ ರಾಜ್ಯ ಪಟ್ಟಕ ಬಾನ ಮಟ್ಟಕ
ಏರ್ಯಾವ ಮುಗಿಲು ರವಿಕಾಣೆ ಹಾಡೆಹಗಲು

ಬೆಟ್ಟತೊಟ್ಟಾವ ಕುಸುನಿಯ ಅಂಗಿ ಹಸಿರು ನೋಡ ತಂಗಿ ಹೊರಟಾವೆಲ್ಲೊ ಜಂಗಿ
ಜಾತ್ರೆಗೇನೊ ನೆರೆದದ ಇಲ್ಲೆ ಥಾನು

ಬನಬನ ನೋಡು ಈಗಹ್ಯಾಂಗ ಮದುವಿ ಮಗನ ಹಾಂಗ ತಲೆಗ ಬಾಸಿಂಗ
ಕಟ್ಟಿಕೊಂಡು ನಿಂತಾವ ಹರ್ಷಗೊಂಡು

ಗುಡ್ಡಗುಡ್ಡ ಸ್ಥಾವರಲಿಂಗ ಅವಕ ಅಭ್ಯಂಗ ಎರೆತಾವನ್ನೊ ಹಂಗಾ
ಹೂಡ್ಯಾವ ಮೋಡ ಸುತ್ತೆಲ್ಲ ನೋಡನೋಡ

ನಾಡೆಲ್ಲಾ ಏರಿ ಯಾವಾರಿ ಹರಿತಾವ ಝರಿ ಹಾಲಿನ ತೊರಿ
ಈಗಯಾಕ ನೆಲಕೆಲ್ಲ ಕುಡಿಸಲಾಕ
 
 

ಮೂಡಲ ಮನೆಯ ಮುತ್ತಿನ ನೀರಿನ

Theme of the week - ಪ್ರಕೄತಿ ಗೀತೆಗಳು
Haadu - Moodala Maneya Muttina Neerina (adapted to the movie Belli Moda)
Rachane - Da Ra Bendre
Haadiruvavaru - S Janaki

http://www.kannadaaudio.com/Songs/Compilations/Classical-Songs-Of-S-Janaki/Moodala-Maneya.ram
 
 
ಮೂಡಲ ಮನೆಯ ಮುತ್ತಿನ ನೀರಿನ
ಎರಕಾವಾ ಹೊಯ್ದಾ ನುಣ್ಣನೆ ಎರಕಾವಾ ಹೊಯ್ದಾ
ಬಾಗಿಲ ತೆರೆದು ಬೆಳಕು ಹರಿದು
ಜಗವೆಲ್ಲ ತೊಯ್ದಾ ದೇವನು ಜಗವೆಲ್ಲಾ ತೊಯ್ದಾ

...
ಎಲೆಗಳ ಮೇಲೆ ಹೂಗಳ ಒಳಗೆ
ಅಮೃತದಾ ಬಿಂದು ಕಂಡವು ಅಮೃತದಾ ಬಿಂದು
ಯಾರಿರಿಸಿಹರು ಮುಗಿಲಿನ ಮೇಲಿಂದ
ಇಲ್ಲಿಗೆ ಇದ ತಂದು ಈಗ ಇಲ್ಲಿಗೆ ಇದ ತಂದು

ಗಿಡಗಂಟೆಗಳ ಕೊರಳೊಳಗಿಂದ
ಹಕ್ಕಿಗಳಾ ಹಾಡು ಹೊರಟಿತು ಹಕ್ಕಿಗಳಾ ಹಾಡು
ಗಂಧರ್ವರ ಸೀಮೆಯಾಯಿತು
ಕಾಡಿನಾ ನಾಡು ಕ್ಷಣದೊಳು ಕಾಡಿನಾ ನಾಡು

ಮಡಕೇರೀಲಿ ಮಂಜು

Theme of the week - ಪ್ರಕೄತಿ ಗೀತೆಗಳು
Haadu - Madikeri Mel Manju
Rachane - G P Rajarathnam
Haadiruvavaru - Mysore Ananthaswamy (KannadaAudio), M D Pallavi (YouTube).

http://www.youtube.com/watch?v=2umpxZSAh6E&feature=related
 
 
ಬೂಮೀನ್ ತಬ್ಬಿದ್ ಮೋಡ್ ಇದ್ದಂಗೆ
ಬೆಳ್ಳಿ ಬಳಿದಿದ್ ರೋಡ್ ಇದ್ದಂಗೆ
ಸಾಫಾಗ್ ಅಳ್ಳ ತಿಟ್ಟಿಲ್ದಂಗೆ
ಮಡಕೇರೀಲಿ ಮಂಜು!

...
ಮಡಗಿದ್ ಅಲ್ಲೇ ಮಡಗಿದ್ದಂಗೆ
ಲಂಗರ್ ಬಿದ್ದಿದ್ ಅಡಗಿದ್ದಂಗೆ
ಸೀತಕ್ ಸಕ್ತಿ ಉಡುಗೋದಂಗೆ
ಅಳ್ಳಾಡಾಲ್ದು ಮಂಜು!
ತಾಯಿ ಮೊಗೀನ್ ಎತ್ಕೊಂಡ೦ಗೆ
ಒಂದಕ್ಕೊಂದು ಅತ್ಕೊ೦ಡ೦ಗೆ
ಮಡಕೇರೀನ ಎದೆಗೊತ್ಕೊಂಡಿ
ಜೂಗೀಡ್ಸ್ತಿತ್ತು ಮಂಜು!

ಮಲಗಾಕ್ ಸೊಳ್ಳೆಪರದೆ ಕಟ್ಟಿ
ಒದಿಯಾಕ್ ಒಗದಿದ್ ದುಬಟಿ ಕೊಟ್ಟಿ
ಪಕ್ದಾಗ್ ಗಂದದ್ ದೂಪ ಆಕ್ದಂಗ್
ಮಡಕೇರೀ ಮೇಲ್ ಮಂಜು!
ಮಂಜಿನ್ ಮಸಕಿನ್ ಕಾವಲ್ನಲ್ಲಿ
ಒಣಗಿದ ಉದ್ದಾನೆ ಉಲ್ನಲ್ಲಿ
ಒಳಗೆ ಏನೋ ಸರದೋದಂಗೆ
ಅಲಗಾಡ್ತಿತ್ತು ಮಂಜು!
ನಡಿಯೋ ದೊಡ್ದೊಡ್ ದೇವಲ್ನಂಗೆ
ಪಟ್ಟದ್ ಸುತ್ತಿನ್ ಕಾವಲ್ನಂಗೆ
ಅಲ್ಲಲ್ಲೇನೆ ಅಂಗಂಗೇನೆ
ಗಸ್ತಾಕ್ತಿತ್ತು ಮಂಜು!

ಸೂರ್ಯನ್ ಕರೆಯಾಕ್ ಬಂದ್ ನಿಂತೋರು
ಕೊಡಗಿನ್ ಎಲ್ಲಾ ಪೂವವ್ನೋರು
ತೆಳ್ನೆ ಬೆಳ್ನೆ ಬಟ್ಟೇನಾಕಿ
ಬಂದಂಗಿತ್ತು ಮಂಜು!
ಚಿಮ್ತಾನಿದ್ರ್ ಎಳಬಿಸಿಲಿನ್ ಕೆಂಪು
ಮಂಜಿನ್ ಬಣ್ಣ ಕಣ್ಗೆ ತಂಪು!
ಕೊಡಗಿನ್ ಲಸ್ಮೀರ್ ಪೂವಮ್ನೋರ್ಗೆ
ಆಲಿನ್ ಸೌಂದ್ರೀ ಮಂಜು!
ಅಗಲೇ ಬರಲಿ ರಾತ್ರೇ ಬರಲಿ
ಬಿಸಿಲು ನೆರಳು ಏನೇ ಇರಲಿ
ಕಣ್ಮರೆಯಾಗಾಕ್ ತಾವ್ ಕೊಡಾಲ್ದು
ಮಡಕೇರೀಗೆ ಮಂಜು!
ತೈಲ ನೀರಿನ್ ಮೇಗಿದ್ದಂಗೆ
ಪೂವಮ್ಮ - ನನ್ ತಂಗೀದ್ದಂಗೆ
ಬಿಟ್ಟೂ ಬಿಡದಂಗ್ ಇಡಕೋ೦ತಿತ್ತು
ಮಡಕೇರೀಗೆ ಮಂಜು!

ಈ ಬಾನು ಈ ಚುಕ್ಕಿ


Theme of the week - ಪ್ರಕೄತಿ ಗೀತೆಗಳು
Haadu - Ee bhanu ee chukki
Rachane - N S LakshmiNarayana Bhatta
Haadiruvavaru - Rathnamala Prakash (KannadaAudio), M D Pallavi (YouTube).

...
 
 
ಈ ಬಾನು ಈ ಚುಕ್ಕಿ ಈ ಹೂವು ಈ ಹಕ್ಕಿ
ತೇಲಿ ಸಾಗುವ ಮುಗಿಲು ಹರುಷ ಉಕ್ಕಿ
ಯಾರು ಇಟ್ಟರು ಇದನು ಹೀಗೆ ಇಲ್ಲಿ
ತುದಿ ಮೊದಲು ತಿಳಿಯದೀ ನೀಲಿಯಲಿ || ಪ ||

...
ಒಂದೊಂದು ಹೂವಿಗೂ ಒಂದೊಂದು ಬಣ್ಣ
ಒಂದೊಂದು ಜೀವಕು ಒಂದೊಂದು ಕಣ್ಣ
ಯಾವುದೋ ಬಗೆಯಲ್ಲಿ ಎಲ್ಲರಿಗು ಅನ್ನ
ಕೊಟ್ಟ ಕರುಣೆಯ ಮೂಲ ಮರೆಸಿಹುದು ತನ್ನ || ೧ ||

ನೂರಾರು ನದಿ ಕುಡಿದು ಮೀರದ ಕಡಲು
ಭೋರೆಂದು ಸುರಿಸುರಿದು ಆರದ ಮುಗಿಲು
ಸೇರಿಯೂ ಕೋಟಿ ತಾರೆ ತುಂಬದಾ ಬಯಲು
ಯಾರದೀ ಮಾಯೆ ಯಾವ ಬಿಂಬದಾ ನೆರಳು || ೨ ||

ಹೊರಗಿರುವ ಪರಿಯೆಲ್ಲ ಅಡಗಿಹುದೇ ಒಳಗೆ
ಹುಡುಕಿದರೆ ಕೀಲಿಕೈ ಸಿಗದೇ ಎದೆಯೊಳಗೆ
ತಿಳಿಯದೆ ಅದರಲ್ಲಿ ಕುಳಿತಿರುವೆ ನೀನೆ
ಎನ್ನುವರು ನನಗೀಗ ಸೋಜಿಗವು ನಾನೇ ||೩ ||

ಏಲಾವನ ಲವಲೀಬನ

Theme of the week - ಪ್ರಕೄತಿ ಗೀತೆಗಳು
Haadu - Elavana lavaleebana
Rachane - Da Ra Bendre
Haadiruvavaru - Kasthuri Shankar

http://www.kannadaaudio.com/Songs/Bhaavageethe/Naakutanti-DaRa-Bendre/Elaa.ram
 
 
ಏಲಾವನ ಲವಲೀಬನ ಲವಂಗ ಬನಗಳಲಿ
ನಾಗಲತಾ ಸಂಕುಲ ಬನವಾಸಿಯ ಜನಗಳಲಿ
ಲೀಲಾಂದೋಲಿತ ಲೋಲಾ ಲಲನಾ ಮಣಿಗಳಲಿ

ಏಲಾಪದ ಲೀಲಾಪದ ಆಲಾಪದ ಸರಣಿ
...
ಸಖಸಖಿಯರ ಮೇಳಾಪದೆ ತೆರೆದಿದೆ ಎದೆ ಭರಣಿ
ಆಲಿಸುತಿವೆ ಮಾಲಿಸುತಿವೆ ಹರಿಣದ ಜತೆ ಹರಿಣಿ

ಯಾಳದ ಜತಿ, ವೇಳೆಯಗತಿ, ಎಳೇಳೇಳೆಂದು
ಎಬ್ಬಿಸು ಮಬ್ಬನು ಚೆದುರಿಸಿ ಬಾಳ್ ಬಾಳ್ ಬಾಳೆಂದು
ತಂತಿಯ ತಾಳಕೆ ಮಿಡಿದಿದೆ, ಏಳಾಯಿತು ಒಂದು

ಏಳೆಯ ಬಸಿರೊಳು ಮಲಗಿದ ಯಾವುದೋ ಗತಿಚಿತ್ರ
ದನಿ ಪಡೆದಿತು ತಿಳಿದೆದ್ದಿತು-ಕಣ್ಪಡೆದ ವಿಚಿತ್ರ
ಆಕ್ಷಣವನು ಈ ಕ್ಷಣವನು ಮಾಡಿತು ಸುಪವಿತ್ರ

ಎಲ್ಲ ಮರೆತಿರುವಾಗ


Haadu - Ella Maretiruvaga
Rachane - K S Nissar Ahmed
Haadirivavaru - Rathnamala Prakash

http://www.kannadaaudio.com/Songs/Bhaavageethe/Legends-RatnamalaPrakash/Ella.ram
 
ಎಲ್ಲ ಮರೆತಿರುವಾಗ ಇಲ್ಲಸಲ್ಲದ ನೆವವ
ಹೂಡಿ ಬರದಿರು ಮತ್ತೆ ಹಳೆಯ ನೆನಪೇ
ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ
ರಾಡಿಗೊಳಿಸುವೆಯೇಕೆ ಮಧುರ ನೆನಪೇ

ಕಪ್ಪು ಕಣ್ಣಿನ ನೆಟ್ಟ ನೋಟದರೆಚಣವನ್ನೇ
ತೊಟ್ಟು ಬಾಣದ ಹಾಗೆ ಬಾರದಿರು ನೆನಪೇ
ಬಿರಿದ ತುಟಿಗಳ ತುಂಬು ನಗೆಯ ಕಾರಣವನ್ನೇ
ಹಿರಿದು ಕೊಲ್ಲಲು ಬಳಿಗೆ ಸಾರದಿರು ನೆನಪೇ ||

ಸತ್ತ ಭೂತವನೆತ್ತಿ ಹದ್ದಿನಂದದಿ ತಂದು
ನನ್ನ ಮನದಂಗಳಕೆ ಹಾಕದಿರು ನೆನಪೇ
ಭವ್ಯ ಭವಿತವ್ಯಕ್ಕೆ ಮೊಗ ಮಾಡಿ ನಿಂತಿರುವೇ
ಬೆನ್ನಲ್ಲೇ ಇರಿಯದಿರು ಓ ಜಾಣ ನೆನಪೇ ||

ಮತ್ತದೇ ಬೇಸರ


Haadu - Mattade besara, ade sanje, ade ekanta
Rachane - K S Nissar Ahmed
Haadirivavaru - Rathnamala Prakash

Apparently, K S Nissar Ahmed used the hindi ghazal "Phir Wohi Shaam Wohi Gham Wohi Tanhaayee" by Talat Mahmood as an insipration for this kannada bhavageethe.
...
 
 
ಮತ್ತದೇ ಬೇಸರ, ಅದೇ ಸಂಜೆ, ಅದೇ ಏಕಾಂತ........
ನಿನ್ನ ಜೊತೆಯಿಲ್ಲ,ದೆ ಮಾತಿಲ್ಲದೆ ಮನ ವಿಭ್ರಾಂತ.

ಕಣ್ಣನೆ ದಣಿಸುವ ಈ ಪಡುವಣ ಬಾನ್ ಬಣ್ಣಗಳು,
ಮಣ್ಣನೆ ಹೊನ್ನಿನ ಹಣ್ಣಾಗಿಸುವೀ ಕಿರಣಗಳು,
...
ಹಚ್ಚನೆ ಹಸುರಿಗೆ ಹಸೆಯಿಡುತಿರುವೀ ಖಗ ಗಾನ -
ಚಿನ್ನ, ನೀನಿಲ್ಲದೆ ಬಿಮ್ಮೆನ್ನುತಿದೆ ರಮ್ಯೋದ್ಯಾನ.

ಆಸೆಗಳ ಹಿಂಡಿನ ತುಳಿತಕ್ಕೆ ಹೊಲ ನನ್ನೀ ದೇಹ;
ಬರುವೆಯೋ, ಬಾರೆಯೋ ನೀನೆನ್ನುತಿದೆ ಹಾ! ಸಂದೇಹ.
ಮುತ್ತಿದಾಲಸ್ಯವ ಬಿಗಿ ಮೌನವ ಹೊಡೆದೋಡಿಸು ಬಾ!
ಮತ್ತೆ ಆ ಸಮತೆಯ ಹಿರಿ ಬೇಲಿಯ ಸರಿ ನಿಲ್ಲಿಸು ಬಾ!

ಬಣ್ಣ ಕಳೆದೊಡವೆಯ ತೆರ ಮಾಸುತಲಿದೆ ಸೂರ್ಯಾಸ್ತ;
ನೋಡಗೋ! ತಿಮಿರದ ಬಲೆ ಬೀಸಿದ ಇರುಳಿನ ಬೆಸ್ತ.
ವೆಚ್ಚವಾಗುತ್ತಿದೆ ಸವಿ ಚಣಗಳ ಧನ ದುಂದಾಗಿ;
ನಲಿವಿನ ಗಳಿಕೆಗೆ ಬಳಸವುಗಳನೊಂದೊಂದಾಗಿ

ಈ ದಿನಾಂತ ಸಮಯದಲಿ

Haadu - Ee dinantha samayadali, upavana ekantadali
Rachane - Nissar Ahmed
Haadirivavaru - Indu Vishwanath, Narasimha Nayak

http://mio.to/9MR7
 
 
ಈ ದಿನಾಂತ ಸಮಯದಲಿ
ಉಪವನ ಏಕಾಂತದಲಿ
ಗೋಧೂಳಿ ಹೊನ್ನಿನಲಿ
ಬರದೆ ಹೋದೆ ನೀನು, ಮರೆತು ಹೋದೆ ನೀನು.

...
ನಾ ಬಿಸುಸುಯ್ಯುವ ಹಂಬಲವೋ
ಶುಭ ಸಮ್ಮಿಲನದ ಕಾತರವೋ
ಬಾ ಇನಿಯ ಕರೆವೆ ನೊಂದು
ಬರದೆ ಹೋದೆ ನೀನು, ಮರೆತು ಹೋದೆ ನೀನು.

ತನುಮನದಲಿ ನೀನೆ ನೆಲಸಿ
ಕಣಕಣವೂ ನಿನ್ನ ಕನಸಿ
ಕಣ್ಣು ಹನಿದು ಕರೆವೆ ನಿನ್ನ
ಬರದೆ ಹೋದೆ ನೀನು, ಮರೆತು ಹೋದೆ ನೀನು.

ಇಳೆಗಿಳಿದಿದೆ ಇರುಳ ನೆರಳು
ದನಿ ಕಳೆದಿದೆ ಹಕ್ಕಿಗೊರಳು
ಶಶಿ ಮೆರೆಸಿದೆ ತೋರುಬೆರಳು
ಬರದೆ ಹೋದೆ ನೀನು, ಮರೆತು ಹೋದೆ ನೀನು.

ಹಗಲಿರುಳಿನ ಈ ನಿರೀಕ್ಷೆ
ಈ ಯಾಚನೆ ಪ್ರಣಯ ಭಿಕ್ಷೆ
ಮೊರೆಯಾಲಿಸಿ ಕಳೆಯೆ ಶಿಕ್ಷೆ
ಬರದೆ ಹೋದೆ ನೀನು, ಮರೆತು ಹೋದೆ ನೀನು

ಒಂದೇ ಬಾರಿ ನನ್ನ ನೋಡಿ

Haadu - Onde Baari Nanna Nodi
Rachane - Ambikatanayadatta (Da Ra Bendre)
Haadirivavaru - M D Pallavi

http://www.youtube.com/watch?v=As8Pb36infc
 
 
ಒಂದೇ ಬಾರಿ ನನ್ನ ನೋಡಿ ಮಂದ ನಗಿ ಹಾಂಗ ಬೀರಿ
ಮುಂದ ಮುಂದ ಮುಂದ ಹೋದ ಹಿಂದ ನೋಡದ ಗೆಳತಿ ಹಿಂದ ನೋಡದ!

ಗಾಳಿ ಹೆಜ್ಜಿ ಹಿಡದ ಸುಗಂಧ ಅತ್ತ ಅತ್ತ ಹೋಗುವಂದ
ಹೋತ ಮನಸು ಅವನ ಹಿಂದ ಹಿಂದ ನೋಡದ ಗೆಳತಿ ಹಿಂದ ನೋಡದ ||
...

ನಂದ ನನಗ ಎಚ್ಚರಿಲ್ಲ ಮಂದಿಗೊಡವಿ ಏನ ನನಗ
ಒಂದೇ ಅಳತಿ ನಡೆದದ ಚಿತ್ತ ಹಿಂದ ನೋಡದ ಗೆಳತಿ ಹಿಂದ ನೋಡದ ||

ಸೂಜಿ ಹಿಂದ ದಾರದ್ಹಾಂಗ ಕೊಳ್ಳದೊಳಗ ಜಾರಿದ್ಹಾಂಗ
ಹೋತ ಹಿಂದ ಬಾರದ್ಹಾಂಗ ಹಿಂದ ನೋಡದ ಗೆಳತಿ ಹಿಂದ ನೋಡದ ||

ಒಂದೇ ಬಾರಿ ನನ್ನ ನೋಡಿ ಮಂದ ನಗಿ ಹಾಂಗ ಬೀರಿ
ಮುಂದ ಮುಂದ ಮುಂದ ಹೋದ ಹಿಂದ ನೋಡದ ಗೆಳತಿ ಹಿಂದ ನೋಡದ!

ಯಾವ ಮೋಹನ ಮುರಲಿ ಕರೆಯಿತೋ

Song - "Yaava Mohana Murali Kareyitu"
Lyrics - Gopalakrishna Adiga
Singer - Rathnamala Prakash on MusicIndiaOnline
...
 
ಯಾವ ಮೋಹನ ಮುರಲಿ ಕರೆಯಿತೋ ದೂರ ತೀರಕೆ ನಿನ್ನನು?
      ಯಾವ ಬೃಂದಾವನವು ಸೆಳೆಯಿತೋ ನಿನ್ನ ಮಣ್ಣಿನ ಕಣ್ಣನು? 

ಹೂವುಹಾಸಿಗೆ, ಚಂದ್ರ, ಚಂದನ, ಬಾಹುಬಂಧನ, ಚುಂಬನ;
      ಬಯಕೆ ತೋಟದ ಬೇಲಿಯೊಳಗೆ ಕರಣಗಣದೀ ರಿಂಗಣ;

ಒಲಿದ ಮಿದುವೆದೆ ರಕ್ತಮಾಂಸದ ಬಿಸಿದು ಸೋಂಕಿನ ಪಂಜರ;
      ಇಷ್ಟೆ ಸಾಕೆಂದಿದ್ದೆಯಲ್ಲೋ! ಇಂದು ಏನಿದು ಬೇಸರ?

ಏನಿದೇನಿದು ಹೊರಳುಗಣ್ಣಿನ ತೇಲುನೋಟದ ಸೂಚನೆ 
      ಯಾವ ಸುಮಧುರ ಯಾತನೆ? ಯಾವ ದಿವ್ಯದ ಯಾಚನೆ?

ಮರದೊಳಡಗಿದ ಬೆಂಕಿಯಂತೆ ಎಲ್ಲೋ ಅಡಗಿದೆ ಬೇಸರ;
      ಏನೋ ತೀಡಲು ಏನೋ ತಾಗಲು ಹೊತ್ತಿ ಉರಿವುದು ಕಾತರ 

ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ,
      ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ?

ವಿವಶವಾಯಿತು ಪ್ರಾಣ; ಹಾ! ಪರವಶವು ನಿನ್ನೀ ಚೇತನ;
      ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ?

ಯಾವ ಮೋಹನ ಮುರಲಿ ಕರೆಯಿತು ಇದ್ದಕಿದ್ದೊಲೆ ನಿನ್ನನು?
      ಯಾವ ಬೃಂದಾವನವು ಚಾಚಿತು ತನ್ನ ಮಿಂಚಿನ ಕೈಯನು?

ಹೊತ್ತಿತೊ ಹೊತ್ತಿತೊ ಕನ್ನಡದ ದೀಪ

This week's theme - songs with the word "Deepa".

Song - Hothitho Hothitho Kannadada Deepa
Lyrics - Siddayya Puranik

http://www.kannadaaudio.com/Songs/Patriotic/HacchevuKannadaDeepa/HotthithoHoththito.ram
 
 
ಹೊತ್ತಿತೊ ಹೊತ್ತಿತೊ ಕನ್ನಡದ ದೀಪ
ಮುಗಿಯಿತೊ ಮುಗಿಯಿತೊ ಶತಮಾನಗಳ ಶಾಪ ||

ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ
ಹರ್ಷ ಉಕ್ಕಿಸುವಂತೆ ಶೋಭಾಯಮಾನ
...
ಕನ್ನಡದ ಮನೆಯಾಗೆ ಜ್ಯೊತಿರ್ನಿಧಾನ
ಕನ್ನಡದ ಪ್ರಾಣ ಕನ್ನಡ ಮಾನ ||

ಉರಿವವರು ಬೇಕಿನ್ನು ಇದರೆಣ್ಣೆಯಾಗಿ
ಸುಡುವವರು ಬೇಕಿದನು ನಿಡು ಬತ್ತಿಯಾಗಿ
ಧರಿಸುವವರು ಬೇಕಿದನು ಸಿರಿ ಹಣತೆಯಾಗಿ
ನನ್ನ ಉಸಿರಾಗಿ ಧರ್ಮಕ್ಕೆ ಬಾಗಿ ||

ಚಿರಕಾಲ ಬೆಳಗಲಿ ಕನ್ನದಡ ದೀಪ
ಜನರೆಲ್ಲರ ಬೆಳಕಾಗಿ ಪುಣ್ಯ ಪ್ರದೀಪ
ಭಾರತಕ್ಕೆ ಬಲವಾಗಿ ಭವ್ಯಪ್ರದೀಪ
ಕಳೆಯುತ್ತ ತಾಪ ಬೆಳೆಸುತ್ತ ಸೈಪ ||

ಬೆಳಗು ಬಾ ಹಣತೆಯನು


This week's theme - songs with the word "Deepa".

Song - Belagu Baa hanatheya
Lyrics - Dr. G S Shivarudrappa
Singer - Ajay Warrier (Youtube link)
...
 
 
ಬೆಳಗು ಬಾ ಹಣತೆಯನು ನನ್ನೆದೆಯ ಗುಡಿಯಲ್ಲಿ|
ದಿವ್ಯ ದೀಪಾವಳಿಯ ಶುಭ ಗಳಿಗೆಯಲ್ಲಿ |
ಬೆಳಗು ಬಾ ಓ ಗೆಳತಿ| ನನ್ನ ಒಲವಿನ ಪ್ರಣತಿ|
ಶತಮಾನಗಳ ತಿಮಿರ ಮುಸುಕಿದೀ ಮಬ್ಬಿನಲಿ||

...
ಬೆಳಗು ಬಾ ದೀವಿಗೆಯ ನನ್ನೆದೆಯ ಗುಡಿಯಲ್ಲಿ|
ದಿವ್ಯ ದೀಪಾವಳಿಯ ಶುಭ ಲಘ್ನದಲ್ಲಿ|
ಎದೆಯ ಕಸವನು ಗುಡಿಸಿ| ರಂಗವಲ್ಲಿಯ ನಿರಿಸಿ |
ಸಿಂಗರಿಸು ನನ್ನೆದೆಯ ನಿನ್ನ ಪ್ರೇಮದ ಅಮ್ರುತ ಸಂಪತ್ತಿನಲ್ಲಿ |

ಬೆಳಗು ಬಾ ಜ್ಯೋತಿಯನು | ಎದೆಯ ಮಂದಿರದಲ್ಲಿ |
ಜಗಕೆ ಬೆಳಕಾಗು ಈ ಶುಭ ಲಘ್ನದಲ್ಲಿ|
ಇನಿತು ದಿನ ಜಡ ನಾನು| ಬಂದೆ ಚೇತನ ನೀನು
ನಿನ್ನ ಶಕ್ತಿಯ ಬಲದಿ ವ್ಯಕ್ತಿಯಾದೆನು ನಾನು ಈ ಲೋಕದಲ್ಲಿ||

ಬಾರೆ ನನ್ನ ದೀಪಿಕಾ

This week's theme - songs with the word "Deepa".

Song - Baare Nanna Deepika
Lyrics - Dr. N S LakshmiNarayana Bhatta
Singer - C Ashwath

http://www.kannadaaudio.com/Songs/Bhaavageethe/home/Deepika.php
 
 
ಬಾರೆ ನನ್ನ ದೀಪಿಕಾ
ಮಧುರ ಕಾವ್ಯ ರೂಪಕ,
ಕಣ್ಣ ಮುಂದೆ ಸುಳಿಯೆ ನೀನು,
ಕಾಲದಾ ತೆರೆ ಸರಿದು ತಾನು,
ಜನುಮ ಜನುಮ ಜ್ಞಾಪಕ.
...

ನಿನ್ನ ಬೊಗಸೆಗಣ್ಣಿಗೆ,
ಕೆನ್ನೆ ಜೇನು ದೊನ್ನೆಗೆ,
ಸಮ ಯಾವುದೇ ಚೆನ್ನೆ ನಿನ್ನ
ಜಡೆ ಹರಡಿದ ಬೆನ್ನಿಗೆ?

ನಿನ್ನ ಕನಸು ಬಾಳಿಗೆ,
ಧೂಪದಂತೆ ಗಾಳಿಗೆ,
ಬೀಸಿ ಬರಲು ಜೀವ ಹಿಗ್ಗಿ,
ವಶವಾಯಿತೆ ದಾಳಿಗೆ.

ಮುಗಿಲ ಮಾಲೆ ನಭದಲಿ,
ಹಾಲು ಪೈರು ಹೊಲದಲಿ,
ರೂಪಿಸುತಿದೆ ನಿನ್ನ ಪ್ರೀತಿ
ಕವಿತೆಯೊಂದ ಎದೆಯಲಿ.

ದೀಪವು ನಿನ್ನದೇ, ಗಾಳಿಯು ನಿನ್ನದೇ

Deepavoo Ninnade Gaaliyoo Ninnade
Lyrics - K S Narasimha Swamy
Singer - "the queen of melody " Rathnamala Prakash

http://www.youtube.com/watch?v=_CCvb1szVhc&feature=results_main&playnext=1&list=PLAA5F291BA926EB47
 
ದೀಪವು ನಿನ್ನದೇ, ಗಾಳಿಯು ನಿನ್ನದೇ
ಆರದಿರಲಿ ಬೆಳಕು.
ಕಡಲು ನಿನ್ನದೇ, ಹಡಗು ನಿನ್ನದೇ,
ಮುಳುಗದಿರಲಿ ಬದುಕು.

...
ಬೆಟ್ಟವು ನಿನ್ನದೇ, ಬಯಲು ನಿನ್ನದೇ
ಹಬ್ಬಿ ನಗಲಿ ಪ್ರೀತಿ.
ನೆಳಲೋ, ಬಿಸಿಲೋ ಎಲ್ಲವು ನಿನ್ನದೇ
ಇರಲಿ ಏಕರೀತಿ.

ಆಗೊಂದು ಸಿಡಿಲು, ಈಗೊಂದು ಮುಗಿಲು
ನಿನಗೆ ಅಲಂಕಾರ.
ಅಲ್ಲೊಂದು ಹಕ್ಕಿ, ಇಲ್ಲೊಂದು ಮುಗುಳು
ನಿನಗೆ ನಮಸ್ಕಾರ.

ಅಲ್ಲಿ ರಣದುಂಧುಭಿ, ಇಲ್ಲೊಂದು ವೀಣೆ
ನಿನ್ನ ಪ್ರತಿಧ್ವನಿ.
ಆ ಮಹಾಕಾವ್ಯ, ಈ ಭಾವಗೀತೆ
ನಿನ್ನ ಪದಧ್ವನಿ

ಪ್ರೀತಿಯ ಕರೆ ಕೇಳಿ ಆತ್ಮನ ಮೊರೆ ಕೇಳಿ


This week's theme - songs with the word "Deepa".

Song - Preethiya Kare Keli...Deepa hachcha
Lyrics - S V Parameshwara Bhatta
Singer - Sinchana Dixit
...
 
 
ಪ್ರೀತಿಯ ಕರೆ ಕೇಳಿ ಆತ್ಮನ ಮೊರೆ ಕೇಳಿ
ನೀ ಬಂದು ನಿಂದಿಲ್ಲಿ ದೀಪ ಹಚ್ಚ ||
ನಲ್ಲ ನೀ ಬಂದಂದು, ಕಣ್ಣಾರೆ ಕಂಡಂದು
ಮನೆಯೆಲ್ಲ ಹೊಳೆದಂತೆ ದೀಪ ಹಚ್ಚ ||

...
ಕರಿಗೆಜ್ಜೆ ಕುಣಿಸುತ್ತ ಕಣ್ಣೀರ ಮಿಡಿಯುತ್ತ
ಇರುಳಾಕೆ ಬಂದಳು ದೀಪ ಹಚ್ಚ
ಬಾನಿನಂಗಳದಲ್ಲಿ ಚುಕ್ಕಿ ಹೊಳೆದೆಸೆವಂತೆ
ನನ್ನ ಮನದಂಗಳದಿ ದೀಪ ಹಚ್ಚ ||

ಹಳೆಬಾಳು ಸತ್ತಿತ್ತು ಕೊಳೆಬಾಳು ಸುಟ್ಟಿತ್ತು
ಹೊಸಬಾಳು ಹುಟ್ಟಿತ್ತು ದೀಪ ಹಚ್ಚ
ಪ್ರೀತಿಯ ರತಿಗೆ ನೀ ಬೆಳಕಿನ ಆರತಿ
ಬೆಳಗಿ ಕಲ್ಲಾರತಿ ದೀಪ ಹಚ್ಚ ||

ವಿಶ್ವಮೋಹಿತ ಚರಣ ವಿವಿಧ ವಿಶ್ವಾಭರಣ
ಆನಂದದ ಕಿರಣ ದೀಪ ಹಚ್ಚ
ನೀನೆಂಬ ಜ್ಯೋತಿಯಲಿ ನಾನೆಂಬ ಪತಂಗ
ಸೋತ ಉಲಿ ಹೇಳಲೀ ದೀಪ ಹಚ್ಚ ||

ನನ್ನಂತರಂಗದಿ ನಂದದೆ ನಿಂದಿಪ
ನಂದಾದೀಪವಾಗಿರಲೀ ದೀಪ ಹಚ್ಚ ||

ಹಾಡು ಹಳೆಯದಾದರೇನು ಭಾವ ನವನವೀನ

‎"Haadu Haleyadaadarenu Bhaava Nava Naveena"
Rachane - Dr. G S Shivarudrappa
Gaayana - Mahalakshmi Shenoy

The audio quality is not that great, but I couldn't find any other links either. Enjoy.

http://www.youtube.com/watch?v=cnviHdrzpec
 
 
ಹಾಡು...ಹಾಡು ...
ಹಾಡು ಹಳೆಯದಾದರೇನು ಭಾವ ನವನವೀನ
ಎದೆಯ ಭಾವ ಹೊಮ್ಮುವುದಕೆ ಭಾಷೆ ಒರಟು ಯಾನ

ಹಳೆಯ ಹಾಡು ಹಾಡು ಮತ್ತೆ ಅದನೆ ಕೇಳಿ ತಣಿಯುವೆ
...
ಹಳೆಯ ಹಾಡಿನಿಂದ ಹೊಸತು ಜೀವನಾ ಕಟ್ಟುವೆ

ಹಮ್ಮು ಬಿಮ್ಮು ಒಂದೂ ಇಲ್ಲ ಹಾಡು ಹೃದಯ ತೆರೆದಿದೆ
ಹಾಡಿನಲ್ಲಿ ಲೀನವಾಗಲೆನ್ನ ಮನವು ಕಾದಿದೆ

ಹಾಡು...ಹಾಡು ...
ಹಾಡು ಹಳೆಯದಾದರೇನು ಭಾವ ನವನವೀನ

ಬೃಂದಾವನಕೆ ಹಾಲನು ಮಾರಲು

‎"Brundavanake haalanu Maaralu Hoguva Baare"
Lyricist - Kuvempu
Haadiruvavaru - Mahalakshmi Shenoy.

http://en.audiofarm.org/audiofiles/12972
 
ಬೃಂದಾವನಕೆ ಹಾಲನು ಮಾರಲು
ಹೋಗುವ ಬಾರೆ ಬೇಗ ಸಖಿ
ಬೃಂದಾವನದಿ ಹಾಲನು
ಕೊಳ್ಳುವರಾರಿಹರೇಳೆ ಇಂದುಮುಖಿ
ಗೋವನು ಕಾಯುವ ಗೋವಿಂದನಿಹನೆ
ಹಾಲನು ಕೊಳ್ಳುವ ಹೇಳೆ ಸಖಿ
ಚಿನ್ನವ ಕೊಡನೆ ರನ್ನವ ಕೊಡನೆ
ತನ್ನನೇ ಕೊಡುವನು ಬಾರೆ ಸಖಿ
ಯಮುನಾ ತೀರದಲಲೆಯುವ ಬಾರೆ
ಹಾಲು ಬೇಕೆ ಹಾಲೆಂದು ಸಖಿ
ಹಾಲನು ಮಾರುವ ನೆವದಿಂದ
ಹರಿಯ ಮೋಹಿಸಿ ಕರೆವ ಬಾರೆ ಸಖಿ
ಹಾಲನಿವೇದಿಸಿ ಆತ್ಮವನರ್ಚಿಸಿ
ಮುಕ್ತಿಯ ಹೊಂದುವ ಸೌಮ್ಯ ಮುಖಿ
ಹಾಲನು ಮಾರಿ ಹರಿಯನು ಕೊಳ್ಳುವ
ನಾವೇ ಧನ್ಯರು ಕಮಲ ಮುಖಿ
ನಮ್ಮೀ ಲಾಭವ ಮೀರುವ ಲಾಭವು
ಬೇರಿನ್ನಿಹುದೇ ಇಂದು ಮುಖಿ
ಬೃಂದಾವನಕೆ ಹಾಲನು ಮಾರಲು
ಹೋಗುವ ಬಾರೆ ಬೇಗ ಸಖಿ

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ


 
 
Artist of the week - Mahalakshmi Shenoy.
 A young and accomplished artist and a child prodigy from Karkala. Visit her website http://mahalakshmi-shenoy.webs.com/ for more information.
 
Here is her rendition of Dr. N S LakshmiNarayana Bhat avara Bhavageethe "Nee sigade baalondu baale krishna" in Hindustani style.

http://www.youtube.com/watch?v=8SuDSuAAv0k

ಕೃಷ್ಣ ..... ಕೃಷ್ಣ .... ಕೃಷ್ಣ .... ಕೃಷ್ಣ ..........
ಕೃಷ್ಣಾ .......

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ ... (೨)
ನಾ ತಾಳಲಾರೆ ಈ ವಿರಹ ಕೃಷ್ಣ .. (೨)
...
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ...

ಕಮಲವಿಲ್ಲದ ಕೆರೆ ನನ್ನ ಬಾಳು
ಚಂದ್ರ ಇಲ್ಲದಾ ರಾತ್ರಿ ಬೀಳು (೨)
ನೀ ಸಿಗದೇ ಉರಿ ಉರಿ ಕಳೆದೆ ಇರುಳ... (೨)
ಮಾತೆಲ್ಲ ಬಿಗಿದಿದೆ ದುಃಖ ಕೊರಳ.....
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ ... (೨)

ಅನ್ನ ಸೇರದು ನಿದ್ದೆ ಬಂದುದೆಂದು
ಕುದಿವೆ ಒಂದೇ ಸಮ ಕೃಷ್ಣ ಎಂದು... (೨)
ಯಾರು ಅರಿವರು ಹೇಳು ನನ್ನ ನೋವ ...(೨)
ತಲ್ಲಣಿಸಿ ಕೂಗುತಿದೆ ದಾಸಿ ಜೀವ

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ.. (೨)

ಒಳಗಿರುವ ಗಿರಿಧರನೇ ಹೊರಗೆ ಬಾರೋ
ಕಣ್ಣೆದುರು ನಿಂತು ಆ ರೂಪ ತೋರೋ (೨)
ಜನುಮ ಜನುಮದಾ ರಾಗ ನನ್ನ ಪ್ರೀತಿ .. ಕೃಷ್ಣ .. ಕೃಷ್ಣ ... ಕೃಷ್ಣಾ ...
ಕೃಷ್ಣ ...
ಜನುಮ ಜನುಮದಾ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೇ ಅದರಾ ರೀತಿ

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ ... (೨)
ನಾ ತಾಳಲಾರೆ ಈ ವಿರಹ ಕೃಷ್ಣ .. (೨)
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ... ಕೃಷ್ಣ .. ಕೃಷ್ಣ .. ಕೃಷ್ಣಾ

ತನುವು ನಿನ್ನದು ಮನವು ನಿನ್ನದು

Another wonderful Song - Tanuvu Ninnadu Manavu Ninnadu
Lyrics - Kuvempu
Singer - Mysore Anathaswamy

http://www.youtube.com/watch?v=Ys8EeSEK_Do&feature=related
 
ತನುವು ನಿನ್ನದು ಮನವು ನಿನ್ನದು
ನನ್ನ ಜೀವನ ಧನವು ನಿನ್ನದು
ನಾನು ನಿನ್ನವನೆಂಬ ಹೆಮ್ಮೆಯ
ತೃಣವು ಮಾತ್ರವೆ ನನ್ನದು ||
 
ನೀನು ಹೊಳೆದರೆ ನಾನು ಹೊಳೆವೆನು
ನೀನು ಬೆಳೆದರೆ ನಾನು ಬೆಳೆವೆನು
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು ||

ನನ್ನ ಮನದಲಿ ನೀನೆ ಯುಕ್ತಿ
ನನ್ನ ಹೃದಯದಿ ನೀನೆ ಭಕ್ತಿ |
ನೀನೆ ಮಾಯಾ ಮೋಹ ಶಕ್ತಿಯು
ನನ್ನ ಜೀವನ ಮುಕ್ತಿಯು

ಎದೆತುಂಬಿ ಹಾಡಿದೆನು

Ede tumbi haadidenu andu naana
Rachane - Dr. G S Shivarudrappa
Music Director - Mysore Ananthaswamy
Singer - Raju Ananthaswamy

http://www.kannadaaudio.com/Songs/Bhaavageethe/home/Ananthagana-Vol-5-Antharathama-Nee-Guru.php
 
ಎದೆತುಂಬಿ ಹಾಡಿದೆನು ಅಂದು ನಾನು,
ಮನವಿಟ್ಟು ಕೇಳಿದಿರಿ ಅಲ್ಲಿ ನೀವು

ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು 
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ.
ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ?

ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ,
ಕೇಳುವವರಿಹರೆಂದು ನಾ ಬಲ್ಲೆನದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ.

ಅಂತರಂಗದ ಮೃದಂಗ

Antharangadaaa Mrudangaa Anthu Thom Thanana
Rachane - Da Raa Bendre
Haadiruvavaru - Mysore AnanthaSwamy

Suprised that there are no YouTube links for such a beautiful song.

http://www.kannadaaudio.com/Songs/Bhaavageethe/Naakutanti-DaRa-Bendre/Antarangada.ram
 
ಅಂತರಂಗದ ಮೃದಂಗ ಅಂತು ತೊಂ ತನಾನ
ಚಿತ್ತ ತಾಳ ಬಾರಿಸುತಲಿತ್ತು ಝಂ ಝಣಣ ನಾನಾ
ನೆನಪು ತಂತಿ ಮೀಟುತಿತ್ತು ತೊಂತನನ ತಾನ, ತೊಂತನನ ತಾನ,
ತೊಂತನನ ತಾನ
 
ಹಲವು ಜನ್ಮದಿಂದ ಬಂದ ಯಾವುದೋನೋ ಧ್ಯಾನ
ಏಕನಾದದಂದದೊಂದು ತಾನದ ವಿತಾನ
ತನಗೆ ತಾನೇ ಸೋಲುತಿಹುದು ನೂಲುತಿಹುದು ಗಾನ ||
 
ಕಲ್ಪದಾದಿಯಲ್ಲೆ ನನ್ನ ನಿನ್ನ ವಿರಹವಾಗಿ
ಎಲ್ಲೋ ಏನೋ ನಿನ್ನ ಹುಡುಕಿ ಕಾಂಬ ಕಣ್ಣೆ ಹೋಗಿ
ಮರೆವೆಗೊಂಡು ಬಿದ್ದೆ ನಾನು ನೆಲದ ಮಣ್ಣು ತಾಗಿ ||
 
ಕತ್ತಲಲ್ಲೆ ಬೆಳಕು ಮಿಂಚಿ ಪಡೆದೀತೇಳು ಬಣ್ಣ
ಮೂಕ ಮೌನ ತೂಕ ಮೀರಿ ದನಿಯು ಹುಟ್ಟಿ ಸಣ್ಣ
ಕಣ್ಣ ಮಣ್ಣ ಕೂಡಲಲ್ಲಿ ಹಾಡು ಕಟ್ಟಿತಣ್ಣ ||

ಬಂಗಾರ ನೀರ ಕಡಲಾಚೆಗೀಚೆಗಿದೆ

Song - Bangaara Neera Kadalaache
Lyrics - Da Ra Bendre
Sung by C Ashwath in the MusicIndiaOnline link and M D Pallavi on YouTube.

http://mio.to/97_V

http://www.youtube.com/watch?v=lthYkWzF0bM
 
ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ (೨)

ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ
ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ
ಅದು ನಮ್ಮ ಊರು ಇದು ನಿಮ್ಮ ಊರು ತಮ್ ತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ ||

ಕರೆ ಬಂದಿತಣ್ಣ ತೆರೆ ಬಂದಿತಣ್ಣ ನೆರೆ ಬಂದಿತಣ್ಣ ಬಳಿಗೆ
ಹರಿತದ ಭಾವ ಬೇರಿತದಾ ಜೀವ ಅದರೊಳಗೆ ಒಳಗೆ ಒಳಗೆ
ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್ ನಿಮ್ಮ ಆತ್ಮಗಳಿಗೆ
ಅಂಬಿಗನು ಬಂದ ನಂಬಿಗನು ಬಂದ ಬಂದದಾ ದಿವ್ಯ ಘಳಿಗೆ ||

ಇದು ಉಪ್ಪು ನೀರ ಕಡಲಲ್ಲೋ ನಮ್ಮ ಒಡಲಲ್ಲು ಇದರ ನೆಲೆಯು
ಕಂಡವರಿಗಲ್ಲೊ ಕಂಡವರಿಗಷ್ಟೇ ತಿಳಿದದಾ ಇದರ ಬೆಲೆಯು
ಸಿಕ್ಕಲ್ಲಿ ಅಲ್ಲ ಸಿಕ್ಕಲ್ಲೆ ಮಾತ್ರ ಒಡೆಯುವುದು ಇದರ ಸೆಲೆಯು
ಕಣ್ ಅರಳಿದಾಗ ಕಣ್ ಹೊರಳಿದಾಗ ಹೊಳೆಯುವುದು ಇದರ ಕಳೆಯು ||
   
ಬಂದವರ ಬಳಿಗೆ ಬಂದದ ಮತ್ತು ನಿಂದವರಾ ನೆರೆಗೂ ಬಂದದೋ ಬಂದದ
ನವ ಮನು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ ||

ಓ ನನ್ನ ಚೇತನ


‎"Soulful songs" is the theme for this week.
A master piece from Rashtrakavi Kuvempu - O Nanna Chetana
Music composition and Singer - C Ashwath.

http://www.youtube.com/watch?v=r9Pqy6nz1OE
...

ಓ ನನ್ನ ಚೇತನ
ಆಗು ನೀ ಅನಿಕೇತನ ||

ರೂಪ ರೂಪಗಳನು ದಾಟಿ
ನಾಮ ಕೋಟಿಗಳನು ಮೀಟಿ
ಎದೆಯ ಬಿರಿಯೆ ಭಾವದೀಟಿ ||

ನೂರುಮತದ ಹೊಟ್ಟ ತೂರಿ
ಎಲ್ಲ ತತ್ವದೆಲ್ಲೆ ಮೀರಿ
ನಿರ್ದಿಗಂತವಾಗಿ ಏರಿ ||

ಎಲ್ಲಿಯೂ ನಿಲ್ಲದಿರು
ಮನೆಯನೆಂದು ಕಟ್ಟದಿರು
ಕೊನೆಯನೆಂದು ಮುಟ್ಟದಿರು ||

ಅನಂತ ತಾನನಂತವಾಗಿ
ಆಗುತಿಹನೆ ನಿತ್ಯ ಯೋಗಿ
ಅನಂತ ನೀ ಅನಂತವಾಗು
ಆಗು ಆಗು ಆಗು ಆಗು ||

ವಿಶ್ವ ವಿನೂತನ ವಿದ್ಯಾಚೇತನ


Haadu - Vishwa Vinootana
Rachane - Rashtrakvi Kuvepu
Raaga Samyojane - C. Ashwath
http://www.kannadaaudio.com/Songs/Patriotic/HacchevuKannadaDeepa/VishwaVinootana.ram

ವಿಶ್ವ ವಿನೂತನ ವಿದ್ಯಾಚೇತನ
ಸರ್ವಹೃದಯ ಸಂಸ್ಕಾರಿ | ಜಯ ಭಾರತಿ ||

ಕರುನಾಡ ಸರಸ್ವತಿ ಗುಡಿಗೋಪುರ ಸುರಶಿಲ್ಪ ಕಲಾಕೃತಿ
ಕೃಷ್ಣೆ ತುಂಗೆ ಕಾವೇರಿ | ಪವಿತ್ರಿತ ಕ್ಷೇತ್ರ ಮನೋಹಾರಿ ||

ಗಂಗಕದಂಬ ರಾಷ್ಟ್ರಕೂಟ ಚಾಲುಕ್ಯ ಹೊಯ್ಸಳ ಬಲ್ಲಾಳ
ಹಕ್ಕಬುಕ್ಕ ಪುಲಿಕೇಶಿ ವಿಕ್ರಮರ ಚೆನ್ನಮ್ಮಾಜಿಯ ವೀರಶ್ರೀ ||

ಅರಿವೇ ಗುರುನುಡಿ ಜ್ಯೋತಿರ್ಲಿಂಗ ದಯವೇ ಧರ್ಮದ ಮೂಲತರಂಗ
ವಿಶ್ವ ಭಾರತಿಗೆ ಕನ್ನಡದಾರತಿ | ಮೊಳಗಲಿ ಮಂಗಳ ಜಯಭೇರಿ ||

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು


Haadu - Udayavagali Namma Cheluva Kannada Naadu
Rachane - Huyilugola Narayana Rao
Raaga Samyojane - ??
Link - http://www.kannadaaudio.com/Songs/Patriotic/HacchevuKannadaDeepa/UdayavaagaliCheluvaKannadaNaadu.ram

...
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಬದುಕು ಬಾಳಿನ ನಿಧಿಯು ಸದಭಿಮಾನದ ಗೂಡು |

ರಾಜನ್ಯರಿಪು ಪರಶುರಾಮನಾಳಿದ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರ ವೃಂದದ ನಾಡು |

ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು
ಚೊಕ್ಕ ಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು ||

ಪಾವನೆಯರಾ ಕೃಷ್ಣ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಫೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರ ನಾರಾಯಣನ ಬೀಡು ||

ನಿತ್ಯೋತ್ಸವ


Theme of the week - Kannada Patriotic songs
Song of the day - Nithyothsava
Rachane - K S Nissar Ahmed
Raaga Samyojane - Mysore Ananthaswamy
Singer - Mysore Ananthaswamy
...
 
ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ,
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......

                        
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ, 
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ 
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ......

                         
ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ, ನಿನಗೆ...... 

ನೇಸಾರ ನೋಡು

Enjoy the beauty of nature with this melodious tune - "Nesara Nodu", a bhavageethe adapted to the classic Kannada movie "Kaakana Kote".

Rachane - Masti Venkatesha Iyengar
Raaga Samyojane - C Ashwath
Links - http://mio.to/9Blp
http://www.youtube.com/watch?v=NxrkPrX50vA
ನೇಸಾರ ನೋಡು ನೇಸರ ನೋಡೂ
ನೇಸಾರ ನೋಡೂ ನೇಸರ ನೋಡು

ಮೂಡಾಣಾ ಬೈಲಿಂದ ಮೇಲಕ್ಕೆ ಹಾರೀ
ದೂರಾದ ಮಲೆಯಾ ತಲೆಯಾನೆ ಏರೀ
ನೇಸಾರ ನೋಡೂ ನೇಸರ ನೋಡು
ನೇಸಾರ ನೋಡು ನೇಸರ ನೋಡೂ

ಹೊರಳೀತೂ ಇರುಳೂ ಬೆಳಕೀನಾ ಗೂಡೂ
ತೆರೆಯೀತು ನೋಡೂ ಬೆಳಗೀತೂ ನಾಡೂ
ನೇಸಾರ ನೋಡು ನೇಸರ ನೋಡೂ
ನೇಸಾರ ನೋಡು ನೇಸರ ನೋಡೂ

Thursday, October 11, 2012

ಮುಂಗಾರಿನ ಅಭಿಷೇಕಕೆ

Lyrics - G S Shivarudrappa
Singer - B R Chaya

MusicIndiaOnline - http://mio.to/9t%3D1
Youtube - http://www.youtube.com/watch?v=gaWa_YLL09w
ಮುಂಗಾರಿನ ಅಭಿಷೇಕಕೆ
ಮಿದುವಾಯಿತು ನೆಲವು.
ಧಗೆಯಾರಿದ ಹೃದಯದಲ್ಲಿ
ಪುಟಿದೆದ್ದಿತು ಚೆಲುವು.

ಬಾಯಾರಿದ ಬಯಕೆಗಳಲಿ
ಥಳಥಳಿಸುವ ನೀರು
ಕಣ್ಣಿಗೆ ಥಣ್ಣಗೆ ಮುತ್ತಿಡುತಿದೆ
ಪ್ರೀತಿಯಂತ ಹಸಿರು.

ಮೈಮನಗಳ ಕೊಂಬೆಯಲ್ಲಿ
ಹೊಮ್ಮುವ ದನಿ ಇಂಪು.
ನಾಳೆಗೆ ನನಸಾಗುವ ಕನಸಿನ
ಹೂವರಳುವ ಕಂಪು.

ಭರವಸೆಗಳ ಹೊಲಗಳಲ್ಲಿ
ನೇಗಿಲ ಗೆರೆ ಕವನ.
ಶ್ರಾವಣದಲಿ ತೆನೆದೂಗುವ
ಜೀವೋತ್ಸವ ಗಾನ.

ಒಂದು ಮುಂಜಾವಿನಲಿ


Lyrics - Channaveera Kanavi
Link - http://www.youtube.com/watch?v=l1inXiJC-b8
 
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ
ಸೋ__ ಎಂದು ಶ್ರುತಿ ಹಿಡಿದು ಸುರಿಯುತ್ತಿತ್ತು
ಅದಕೆ ಹಿಮ್ಮೇಳವೆನೆ ಸೋಸಿಪಹ ಸುಳಿಗಾಳಿ
ತೆಂಗುಗರಿಗಳ ನಡುವೆ ನುಸುಳುತಿತ್ತು || ಒಂದು ಮುಂಜಾವಿನಲಿ ||

ಇಳೆವೆಣ್ಣು ಮೈದೊಳೆದು ಮಕರಂದದರಿಶಿನದಿ
ಹೂ ಮುಡಿದು ಮದುಮಗಳ ಹೋಲುತಿತ್ತು
ಮೂಡಣದಿ ನೇಸರನ ನಗೆಮೊಗದ ಶ್ರೀಕಾಂತಿ
ಬಿಳಿಯ ಮೋಡದ ಹಿಂದೆ ಹೊಳೆಯುತ್ತಿತ್ತು || ಒಂದು ಮುಂಜಾವಿನಲಿ ||

ಹುಲ್ಲೆಸಳು ಹೂಪಕಳೆ ಮುತ್ತು ಹನಿಗಳ ಮಿಂಚು
ಸೊಡರಿನಲಿ ಆರತಿಯ ಬೆಳಗುತ್ತಿತ್ತು
ಕೊರಳುಕ್ಕಿ ಹಾಡುತಿಹ ಚಿಕ್ಕ ಪಕ್ಕಿಯ ಬಳಗ
ಶುಭಮಸ್ತು ಶುಭಮಸ್ತು ಎನ್ನುತ್ತಿತ್ತು || ಒಂದು ಮುಂಜಾವಿನಲಿ ||

ತಳಿರತೋರಣದಲ್ಲಿ ಬಳ್ಳಿಮಾಡಗಳಲ್ಲಿ
ದುಂಬಿಗಳ ಓಂಕಾರ ಹೊಮ್ಮುತ್ತಿತ್ತು
ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ
ಚಿಟ್ಟೆ ರಿಂಗಣಗುಣಿತ ಹಾಕುತಿತ್ತು || ಒಂದು ಮುಂಜಾವಿನಲಿ ||

ಉಷೆಯ ನುಣ್ಗದಪಿನಲಿ ಹರ್ಷ ಬಾಷ್ಪಗಳಂತೆ
ಮರದ ಹನಿ ತಟಪಟನೆ ಉದುರುತಿತ್ತು
ಸೃಷ್ಟಿ ಲೀಲೆಯೊಳಿಂತು ತಲ್ಲೀನವಾದಮನ
ಮುಂಬಾಳ ಸವಿಗನಸ ನೆನೆಯುತಿತ್ತು || ಒಂದು ಮುಂಜಾವಿನಲಿ

ಹಚ್ಚೇವು ಕನ್ನಡದ ದೀಪ


Lyrics -  D.S.Karki
Composer - C.Ashwath
Link - http://www.kannadaaudio.com/Songs/Patriotic/HacchevuKannadaDeepa/HacchevuKannadaDeepa.ram


ಹಚ್ಚೇವು ಕನ್ನಡದ ದೀಪ
ಹಚ್ಚೇವು ಕನ್ನಡದ ದೀಪ
ಕರುನಾಡು ದೀಪ ಸಿರಿಮುಡಿಯ ದೀಪ ಒಲವೆತ್ತಿ ಕೋರುವಾ ದೀಪಾ ಆ ..
ಬಹುದಿನಗಳಿಂದ ಮೈಮರವೆಯಿಂದ ಕೂಡಿರುವ ಕೊಳೆಯಾ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸಲು ಅಲ್ಲಲ್ಲಿ ಕರನಾ ಚಾಚೇವು
ಬಹುದಿನಗಳಿಂದ ಮೈಮರವೆಯಿಂದ ಕೂಡಿರುವ ಕೊಳೆಯಾ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸಲು ಅಲ್ಲಲ್ಲಿ ಕರಣಾ ಚಾಚೇವು
ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯಾ ಕೆಚ್ಚೇವು
ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯಾ ಕೆಚ್ಚೇವು
ಮರೆತೆವು ಮರೆವ ತೆರೆದೇವು ಮಾನವ ಎರೆದೇವು ಒಲವಾ ಹಿಡಿನೆನಪಾ
ನರನರವನೆಲ್ಲಾ ಹುರಿಗುಳಿಸಿ ಹೊಸೆದು ಹಚ್ಚೇವು ಕನ್ನಡದ ದೀಪ

ಕಲ್ಪನೆಯ ಕಣ್ಣು ಹರಿವನಕ ಸಾಲು ದೀಪ ಗಳ ಬೆಳಕಾ ಬೀರೇವು
ಹಚ್ಚಿರುವ ದೀಪದಲಿ ತಾಯ ರೂಪ ಅಚ್ಚಳಿಯದಂತೆ ಕೊರೆವು
ಕಲ್ಪನೆಯ ಕಣ್ಣು ಹರಿವನಕ ಸಾಲು ದೀಪ ಗಳ ಬೆಳಕಾ ಬೀರೇವು
ಹಚ್ಚಿರುವ ದೀಪದಲಿ ತಾಯ ರೂಪ ಅಚ್ಚಳಿಯದಂತೆ ಕೊರೆವು
ಒಡಲೊಡಲ ಕೆಚ್ಚಿನಾ ಕಿಡಿಗಳನ್ನು ಗಡಿನಾಡೆ ನಾಚೆ ಕೂರೆವು
ಒಡಲೊಡಲ ಕೆಚ್ಚಿನಾ ಕಿಡಿಗಳನ್ನು ಗಡಿನಾಡೆ ನಾಚೆ ಕೂರೆವು
ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ ನಾದುಳವೆನೀತಿ ಹಿಡಿನೆನಪಾ
ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ
 
ನಮ್ಮವರುಗಳಿಸಿದ ಹೆಸರುಳಿಸಲು ಎಲ್ಲಾರು ಒಂದೂ ಗೂಡೆವು
ನಮ್ಮೆದೆಯ ಮಿದುಯುವೀ ಮಾತಿನಲ್ಲಿ ಮಾತೆಯನು ಪೂಜೆ ಮಾಡೆವು
ನಮ್ಮವರುಗಲಿಸಿದ ಹೆಸರುಳಿಸಲು ಎಲ್ಲಾರು ಒಂದೂ ಗೂಡೆವು
ನಮ್ಮೆದೆಯ ಮಿದುಯುವೀ ಮಾತಿನಲ್ಲಿ ಮಾತೆಯನು ಪೂಜೆ ಮಾಡೆವು
ನಮ್ಮುಸಿರು ತೀಡುವೆ ನಾಡಿನಲ್ಲಿ ಮಾಂಗಲ್ಯ ಗೀತಾ ಹಾಡೇವು
ನಮ್ಮುಸಿರು ತೀಡುವೆ ನಾಡಿನಲ್ಲಿ ಮಾಂಗಲ್ಯ ಗೀತಾ ಹಾಡೇವು
ಕುರೆದೆವು ಮರುಳ ಕಡೆದೇವು ಇರುಳ ಪಡೆದೆವು ತಿರುಳ ಹಿಡಿನೆನಪಾ
ಕರುಳೆಂಬ ಕುಡಿಗೆ ಮಿನ್ಚನ್ನ ಮುಡಿಸಿ ಹಚ್ಚೇವು ಕನ್ನಡದ ದೀಪ

ಮುಚ್ಚುಮರೆಯಿಲ್ಲದೆಯೆ


Lyrics - Kuvempu
Singer - Raju Ananthaswamy
 
 
ಮುಚ್ಚುಮರೆಯಿಲ್ಲದೆಯೆ ನಿನ್ನ ಮುಂದೆಲ್ಲವನು
ಬಿಚ್ಚಿಡುವೆ ಓ ಗುರುವೇ ಅಂತರಾತ್ಮ
ಪಾಪವಿದೆ ಪುಣ್ಯವಿದೆ ನರಕವಿದೆ ನಾಕವಿದೆ
ಸ್ವೀಕರಿಸು ಓ ಗುರುವೇ ಅಂತರಾತ್ಮ ||

...
ರವಿಗೆ ಕಾಂತಿಯನೀವ ನಿನ್ನ ಕಣ್ಣೀಕ್ಷಿಸಲು
ಪಾಪ ತಾನುಳಿಯುವುದೇ ಪಾಪವಾಗಿ
ಗಂಗೆ ತಾನುದ್ಭವಿಪ ನಿನ್ನಡಿಯ ಸೋಂಕಿಗೆ
ನರಕ ತಾನುಳಿಯುವುದೇ ನರಕವಾಗಿ ||

ಶಾಂತ ರೀತಿಯಳಿಮ್ಮಿ ಕದಡಿರುವುದೆನ್ನಾತ್ಮ
ನಾಂತ ರೀತಿಯು ಅದೆಂತೋ ಓ ಅನಂತ
ನನ್ನ ನೀತಿಯ ಕುರುಡಿನೆಂದೆನ್ನ ರಕ್ಷಿಸೈ
ನಿನ್ನ ನೀತಿಯ ಬೆಳಕಿನ ಆನಂದಕೈ ||